Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕೇರಳದಲ್ಲಿ ಶತ್ರು ಸಂಹಾರ ಪೂಜೆ ಮಾಡಿಸಿದ್ರಾ ನಟ ದರ್ಶನ್..?

---Advertisement---

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಲಾಕ್ ಆಗಿ, ಜಾಮೀನಿನ ಮೇಲೆ ಹೊರ ಬಂದ ಮೇಲೆ ದರ್ಶನ್ ಆಕ್ಡೀವ್ ಆಗಿದ್ದಾರೆ. ಅರ್ಧಕ್ಕೆ ನಿಂತು ಹೋಗಿದ್ದ ಸಿನಿಮಾವನ್ನು ಮತ್ತೆ ಶುರು ಮಾಡಿದ್ದಾರೆ. ಅದರಲ್ಲೂ ಹೆಂಡತಿ, ಮಗನ ಜೊತೆಗೆ ಹೆಚ್ಚು ಸಮಯವನ್ನು ಕಳೆತುತ್ತಿದ್ದಾರೆ. ವಿಜಯಲಕ್ಷ್ಮಿ ಅವರು ಕೂಡ ದರ್ಶನ್ ಏಳ್ಗೆಗೆ ಶ್ರಮ ಹಾಕುತ್ತಿದ್ದಾರೆ. ಇದೀಗ ಕುಟುಂಬ ಸಮೇತ ಶಕ್ತಿ ಪೀಠಕ್ಕೆ ಭೇಟಿ ನೀಡಿದ್ದಾರೆ.

ಕೇರಳದ ಕಣ್ಣೂರಿ‌ಲ್ಲಿ ಪ್ತಸಿದ್ಧ ದೇವಾಲಯವೊಂದಿದೆ. ಮಡಾಯಿ ಶ್ರೀ ತಿರುವರ್ಕಾಟ್ಟು ಕಾವು ಭಗವತಿ ದೇವಸ್ಥಾನ. ಇಲ್ಲಿಗೆ ಹಲವು ರಾಜಕಾರಣಿಗಳು ಶತ್ರು ಸಂಹಾರ ಪೂಜೆ ಮಾಡಿಸಲು ತೆರಳುತ್ತಾರೆ. ಈ ದೇವಾಲಯಕ್ಕೂ ನಟ ದರ್ಶನ್ ಕುಟುಂಬ ಸಮೇತವಾಗಿ ತೆರಳಿದ್ದಾರೆ. ಆ ಫೋಟೋ, ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

ಇಲ್ಲಿ ಶತ್ರು ಸಂಹಾರ ಪೂಜೆ ಮಾಡಿಸಿದ್ದಾರೆ ಎನ್ನಲಾಗಿದೆ. ಈ ದೇವಾಸ್ಥಾನ ಖ್ಯಾತಿ ಪಡೆದಿರುವುದೇ ಶತ್ರು ಸಂಹಾರಕ್ಕಾಗಿ. ಹೀಗಾಗಿ ದರ್ಶನ್ ಅವರು ಕೂಡ ಶತ್ರು ಸಂಹಾರ ಪೂಜೆ ಮಾಡಿಸಿದರಾ ಎಂಬ ಅನುಮಾನ ಎಲ್ಲರನ್ನು ಕಾಡಿದೆ. ದರ್ಶನ್ ಅವರ ಬಿಡುಗಡೆಗಾಗಿ ವಿಜಯಲಕ್ಷ್ಮಿ ತಿರುಗಿದ ದೇವಸ್ಥಾನಗಳೇ ಹೆಚ್ಚು. ಅದರಲ್ಲೂ ಶಕ್ತಿ ಪೀಠಗಳ ಮೊರೆ ಹೋಗಿದ್ದರು. ದರ್ಶನ್ ಅವರು ಆದಷ್ಟು ಬೇಗ ಬಿಡುಗಡೆಯಾಗಲಿ ಎಂದೇ ಬೇಡಿಕೊಂಡಿದ್ದರು. ಹರಕೆ ಹೊತ್ತುಕೊಂಡಿದ್ದರು. ಇದೀಗ ದರ್ಶನ್ ಹಾಗೂ ಮಗ ವಿನೀಶ್ ಜೊತೆಗೂಡಿ ದೇವಸ್ಥಾನಗಳಿಗೆ ಭೇಟಿ ನೀಡುತ್ತಾ ಇದ್ದಾರೆ. ಇಂದು ಕೇರಳದ ಮಡಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈಗಾಗಲೇ ದರ್ಶನ್ ಅವರಿಂದ ಹಲವರನ್ನು ದೂರ ಇಟ್ಟಿರುವ ವಿಜಯಲಕ್ಷ್ಮಿ, ಯಾರ ಕೆಟ್ಟ ಕಣ್ಣು ಬೀಳದಿರಲೆಂದು ಪೂಜೆ ಮಾಡಿಸಿರಬಹುದು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment