Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆಂಡಕಾರುತ್ತಿದ್ದ ಬಿಕೆ ಹರಿಪ್ರಸಾದ್ ಜೊತೆಗೆ ಕೈ ಜೋಡಿಸಿದರಾ ಸಿಎಂ ಸಿದ್ದರಾಮಯ್ಯ..?

---Advertisement---

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಬ್ದುಲ್ ರೆಹಮಾನ್ ಹತ್ಯೆಯ ಬಳಿಕ ಸಾಕಷ್ಟು ಬೆಳವಣಿಗೆಗಳು ನಡೆದಿವೆ. ಈ ಸಂಬಂಧ ಮುಸ್ಲಿಂ ಮುಖಂಡರ ಸಭೆಯು ನಡೆದಿದೆ. ಈ ಸಭೆಯನ್ನ ಅರ್ಧಕ್ಕೆ ನಿಲ್ಲಿಸಿ, ದೊಡ್ಡ ಗಲಾಟೆಯೂ ನಡೆದಿದೆ. ಇದೀಗ ಮತ್ತೊಂದು ದೊಡ್ಡ ಬೆಳವಣಿಗೆ ಅಂದ್ರೆ ಅದು ಸಿದ್ದರಾಮಯ್ಯ ಅವರ ನಡೆ ವಿಚಾರ.

ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಅವರು ಬಿಕೆ ಹರಿಪ್ರಸಾದ್ ಅವರ ಮನೆಗೆ ಹೋಗಿದ್ದರು. ಈ ಬಿಕೆ ಹರಿಪ್ರಸಾದ್ ನೇರಾ ನೇರಾ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈಗ ನೋಡಿದ್ರೆ ಇಬ್ಬರು ದೋಸ್ತಿಗಳಾಗಿದ್ದಾರೆ. ಬೆಳಗ್ಗೆನೆ ಸಿಎಂ ಸಿದ್ದರಾಮಯ್ಯ ಅವರೇ ಬಿಕೆ ಹರಿಪ್ರಸಾದ್ ಅವರ ನಿವಾಸಕ್ಕೆ ಹೋಗಿ ಭೇಟಿಯಾಗಿದ್ದಾರೆ. ಮೂಲಗಳ ಪ್ರಕಾರ ಈ ಭೇಟಿಯ ಹಿಂದೊಂದು ಕಾರಣವಿದೆ ಎನ್ನಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಂ ಕಾಂಗ್ರೆಸ್ ಕಾರ್ಯಕರ್ತರೆಲ್ಲ ಸಾಮೂಹಿಕವಾಗಿ ರಾಜೀನಾಮೆ ನೀಡ್ತೇವೆ ಎಂದು ಕೂತಿದ್ದಾರೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ, ಪರಿಶೀಲನೆ ನಡೆಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಇಂದು ಬೆಳಗಿನ ಉಪಹಾರ ಮಾಡಿದ್ದು, ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು. ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಿದ್ದಾರೆ. ಬಿಕೆ ಹರಿಪ್ರಸಾದ್ ಅವರಿಗೆ ಮಂಗಳೂರಿಗೆ ಹೋಗಿ ಬನ್ನಿ ಎಂದಿದ್ದೇನೆ. ಅಲ್ಲಿನ ಪರಿಸ್ಥಿತಿ ಬಗ್ಗೆ ಅವಲೋಕಿಸಿ ಬನ್ನಿ ಎಂದಿದ್ದೇನೆ. ಕೋಮು ಗಲಭೆಗಳನ್ನು ಉಂಟು ಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು.ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment