Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭ್ರಷ್ಟಾಚಾರ ಮಾಡಿದ್ದೀರಿ ಅನ್ನೋದು ಡರ್ಟಿ ಪಾಲಿಟಿಕ್ಸಾ..? : ಸಿದ್ದರಾಮಯ್ಯ ಪ್ರಶ್ನೆ

Facebook
Twitter
Telegram
WhatsApp

 

ಬಾದಾಮಿ ಕ್ಷೇತ್ರದ ಜನ ನನ್ನ ಕೈ ಹಿಡಿದು ಗೆಲ್ಲಿಸಿದರು ಎಂದು ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೆಚ್ಚು ಕೆಲಸ ಮಾಡಿದ್ದೆ. ಆದರೆ ಚಾಮುಂಡೇಶ್ವರಿ ಕ್ಷೇತ್ರದ ಜನ ನನ್ನ ಕೈ ಹಿಡಿಯಲಿಲ್ಲ. ಅದೇ ನಾನು ವರುಣಾ ಕ್ಷೇತ್ರದಲ್ಲಿ ನಿಂತಿದ್ದರೆ ನನ್ನನ್ನು ಗೆಲ್ಲಿಸುತ್ತಾ ಇದ್ದರು.

ನನ್ನನ್ನು ಗೆಲ್ಲಿಸಿ ಸಿಎಂ ಮಾಡಿದ್ದು ವರುಣಾ ಕ್ಷೇತ್ರದ ಜನ.‌ ಹೀಗಾಗಿ ವರುಣಾ ಕ್ಷೇತ್ರದ ಜನರ ಋಣ ನನ್ನ ಮೇಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದೇ ವೇಳೆ ಪೇಸಿಎಂ ಕ್ಯಾಂಪೇನ್ ಡರ್ಟಿ ಪಾಲಿಟಿಕ್ಸ್ ಎಂದು ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ್ದ ವಿಚಾರಕ್ಕೆ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಡರ್ಟಿ ಪಾಲಿಟಿಕ್ಸ್ ಮಾಡುವುದು ಸಂಘ ಪರಿವಾರದವರು. ನಾವೂ ಕೀಳುಮಟ್ಟದ ರಾಜಕಾರಣ ಮಾಡಿಲ್ಲ. ಭ್ರಷ್ಟಾಚಾರ ಮಾಡಿದ್ದೀರಿ ಅನ್ನೋದು ಡರ್ಟಿ ಪಾಲಿಟಿಕ್ಸಾ..? ಬಿಜೆಪಿಯವರು ರಾಜಕಾರಣದ ಉದ್ದೇಶದಿಂದ ಹೇಳುತ್ತಿದ್ದಾರೆ. ಕಾಂಗ್ರೆಸ್ ನವರು ಹೋರಾಡಿ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಮಹಾತ್ಮ ಗಾಂಧಿ ಕೊಂದವರನ್ನು ಇವರು ಆರಾಧಿಸುತ್ತಾರೆ. ಗಣೇಶ ಮರವಣಿಗೆಯಲ್ಲಿ ಗೋಡ್ಸೆ ಫೋಟೋ ಇಡುತ್ತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ಚುನಾವಣಾ ಕರ್ತವ್ಯ ನಿರತ ಎಪಿಆರ್ ಓ ಶಿಕ್ಷಕಿ ಸಾವು

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಏಪ್ರಿಲ್.26 : ಲೋಕಸಭಾ ಚುನಾವಣೆ ಕರ್ತವ್ಯ ವೇಳೆ ಹೃದಯಘಾತದಿಂದ  ಕರ್ತವ್ಯ ನಿರತ  ಎಪಿಆರ್ ಓ  ಶಿಕ್ಷಕಿ ಯಶೋದಮ್ಮ(55)

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ : ಮತದಾರರಿಂದ ಉತ್ತಮ ಸ್ಪಂದನೆ : ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ?

  ಚಿತ್ರದುರ್ಗ .26: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ದಾಖಲಾಗಿದೆ‌. ಬೆಳಗಿನ 11 ಗಂಟೆವರೆಗೆ ಶೇ 21.75 % ಮತದಾನ ದಾಖಲಾಗಿದೆ. ವಿಧಾನ ಸಭಾ ಕ್ಷೇತ್ರವಾರು ಚಳ್ಳಕೆರೆ- 22.55%, ಚಿತ್ರದುರ್ಗ-23.73%,ಹಿರಿಯೂರು-20.79% , ಹೊಳಲ್ಕೆರೆ

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

error: Content is protected !!