Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಿಪಿ ಯೋಗೀಶ್ವರ್ ಗೆ ಕಾಂಗ್ರೆಸ್ ನಿಂದ ಆಫರ್ ಬಂದಿದ್ಯಾ..? ಸ್ವತಃ ಸಿಪಿವೈ ಹೇಳಿದ್ದೇನು..?

---Advertisement---

ರಾಮನಗರ: ಚನ್ನಪಟ್ಟಣ ಕ್ಷೇತ್ರ ಸದ್ಯ ಹೈವೋಲ್ಟೇಜ್ ಕ್ಷೇತ್ರವಾಗಿದೆ. ಎರಡು ಪಕ್ಷಗಳಿಂದ ಯಾರು ನಿಲ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಸದ್ಯ ಕಾಂಗ್ರೆಸ್ ನಿಂದ ಸಿಪಿ ಯೋಗೀಶ್ವರ್ ಗೆ ಆಫರ್ ಹೋಗಿದೆ ಎನ್ನಲಾಗಿದೆ. ಝ ಎಲ್ಲಾ ಬೆಳವಣಿಗೆಯ ಬಗ್ಗೆ ಸಿಪಿ ಯೋಗೀಶ್ವರ್ ಹೇಳಿದ್ದು ಹೀಗೆ, ಗುರುವಾರ ನಾಮಪತ್ರವನ್ನ ಸಲ್ಲಿಕೆ ಮಾಡ್ತೀನಿ. ಅಂತಿಮವಾಗಿ ಯಾವ ಚಿಹ್ನೆಯಿಂದ ಸ್ಪರ್ಧಿಸಬೇಕು ಎಂಬುದನ್ನು ಇಂದು ಸಂಜೆಯೊಳಗೆ ತೀರ್ಮಾನ ಮಾಡುತ್ತೇನೆ.

ಚುನಾವಣೆ ಎಂದ ಮೇಲೆ ರಾಜಕೀಯ ಪಕ್ಷಗಳು ಆಫರ್ ಕೊಡ್ತವೆ. ಈಗ ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರವಾಗಿದೆ. ಎಲ್ಲಾ ಮುಖಂಡರ ಜೊತೆಗೆ ಕೂತು, ಚರ್ಚಿಸಿ ಒಂದು ತೀರ್ಮಾನಕ್ಕೆ ಬರ್ತೇನೆ. ನಮ್ಮ ಮುಖಂಡರು ಯಾವ ಪಕ್ಷದಿಂದ ಅಂತ ಹೇಳ್ತಾರೋ ಆ ಪಕ್ಷದಿಂದ ನಿಲ್ತೇನೆ. ನಾನಂತು ಈಗಾಗಲೇ ಸ್ವತಂತ್ರವಾಗಿ ಸ್ಪರ್ಧೆ ಮಾಡ್ತೇನೆ ಅಂತ ಹೇಳಿದ್ದೀನಿ. ಚರ್ಚೆ ಬಳಿಕ, ಇಂದು ಸಂಜೆಯೊಳಗೆ ಚಿಹ್ನೆಯ ಗುರುತನ್ನು ತಿಳಿಸುತ್ತೇನೆ.

ಎಲ್ಲಾ ಥರದ ಊಹಾಪೋಹಗಳಿವೆ. ಆದರೆ ಸಂಜೆ ವೇಳೆಗೆ ಎಲ್ಲಾ ವಿಚಾರಗಳು ತಿಳಿಸುತ್ತೇನೆ. ದುಡಿಕಿನ ತೀರ್ಮಾನ ಇಲ್ಲ. ಮುಂಖಂಡರು ತಮ್ಮ ಅಭಿಪ್ರಾಯವನ್ನ ಮುಕ್ತವಾಗಿ ಹೇಳಿಕೊಳ್ಳಬೇಕು.ಮುಖಂಡರ ಅಭಿಪ್ರಾಯದ ಮೇರೆಗೆ ನಾನು ನಿಲ್ಲುತ್ತೇನೆ.

ನಾನು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಪಕ್ಷದ ಮುಖಂಡರ ಜೊತೆಗೆ ಕೂತು ಚರ್ಚೆ ಮಾಡುತ್ತೇನೆ. ಇವತ್ತು ಕಾಯ್ತೀನಿ. ಬಿಜೆಪಿ ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡಬೇಕು. ನಾನು ಯಾರನ್ನೂ ಸಂಪರ್ಕ ಕೂಡ ಮಾಡಿಲ್ಲ. ನನಗೂ ಯಾರೂ ಸಂಪರ್ಕ ಮಾಡಿಲ್ಲ. ಬೇರೆ ಬೇರೆ ಸ್ನೇಹಿತರು ಅಲ್ಲಿ ಇಲ್ಲಿ ಬಂದು ಹೇಳ್ತಾರೆ. ನಮ್ಮ ಮುಖಂಡರೆ ಅಂತಿಮ. ಅವರು ಏನು ಹೇಳ್ತಾರೆ ನೋಡೋಣಾ. ಸಿದ್ದರಾಮಯ್ಯ ಅವರು ಹೇಳಿದ ಹೇಳಿಕೆ ಅವರ ದೊಡ್ಡ ಗುಣ. ನಾನು ಈ ಹಿಂದೆ ಕಾಂಗ್ರೆಸ್ ನಲ್ಲಿದ್ದವನು. ಸದ್ಯಕ್ಕೆ ನನಗೇನು ಉತ್ತರ ಕೊಡುವುದಕ್ಕೆ ಆಗ್ತಿಲ್ಲ. ಸಂಜೆ ಮಾತಾಡ್ತೀನಿ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...