Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬಿಜೆಪಿ ನೂತನ ರಾಜ್ಯಾಧ್ಯಕ್ಷರ ಬಗ್ಗೆ ಅಸಮಾಧಾನ ಹೊರ ಹಾಕಿದರಾ ಸಿಟಿ ರವಿ…? ವಿಜಯೇಂದ್ರ ಬಗ್ಗೆ ಹೇಳಿದ್ದೇನು..?

---Advertisement---

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಿನ್ನೆಯಷ್ಟೇ ಹೊಸ ನೇಮಕವಾಗಿದೆ. ಯಡಿಯೂರಪ್ಪ ಅವರ ಪುತ್ರನ ನೇಮಕದಿಂದಾಗಿ ಹಲವಾರು ಮಂದಿ ಖುಷಿಯಾಗಿದ್ದಾರೆ‌. ಶುಭಾಶಯಗಳ ಸುರಿಮಳೆಯೇ ಸುರಿಯುತ್ತಿದೆ. ಇದರ ನಡುವೆ ಹಲವರಿಗೆ ಬೇಸರವೂ ಆಗಿದೆ. ಅದರಲ್ಲಿ ಸಿಟಿ ರವಿ ಕೂಡ ಒಬ್ಬರು. ಬಿವೈ ವಿಜಯೇಂದ್ರ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

ಇಂದು ಕೆಂಪೇಗೌಡ ಇಂಟರ್ ನ್ಯಾಶನಲ್ ಏರ್ಪೋರ್ಟ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಟಿ ರವಿ ಅವರು, ವಿಜಯೇಂದ್ರ ಅವರನ್ನು ಪಕ್ಷ ನೇಮಕ ಮಾಡಿದೆ. ವೈಚಾರಿಕ ಭದ್ರತೆಯ ಜೊತೆಗೆ ಪಕ್ಷ ಕಟ್ಟಿ ಬೆಳೆಸುವ ಕೆಲಸವನ್ನು ಅವರು ಮಾಡಬೇಕಿದೆ ಪ್ರಮುಖವಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಕ್ಕೆ 28 ಸ್ಥಾನ ಗೆಲ್ಲಿಸುವ ಹೊಣೆಗಾರಿಕೆ ಅವರ ಮೇಲಿದೆ. ಈಗ ನಾನೊಬ್ಬ ಸಾಮಾನ್ಯ ಕಾರ್ಯಕರ್ತ.

 

ಅಸಮಾಧಾನದ ಬಗ್ಗೆ ನಾನು ಈಗ ಏನು ಮಾತನಾಡಲ್ಲ. 35 ವರ್ಷದಿಂದ ರಾಜಕೀಯ ಕ್ಷೇತ್ರದಲ್ಲಿದ್ದೀನಿ. ಬೂತ್ ಅಧ್ಯಕ್ಷನಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯವರೆಗೂ ಕಾರ್ಯ ನಿರ್ವಹಿಸಿದ್ದೀನಿ. ಈಗ ನಾನು ಏನು ಮಾತನಾಡಲ್ಲ. ಈಗಾಗಲೇ ಬಹಳ ಮಾತನಾಡಿದ್ದೇನೆ. ಈಗ ನಾನೇನಾದರೂ ಮಾತನಾಡಿದರೆ, ನಮ್ಮ ಮಾತೆ ನಮಗೆ ತಿರುಗು ಬಾಣವಾಗುತ್ತದೆ ಎಂದಿದ್ದಾರೆ. ಈ ಮೂಲಕ ವಿಜಯೇಂದ್ರ ಅವರ ಮೇಲೆ ಅಸಮಾಧಾನ ಹೊರ ಹಾಕಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment