Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ನೂತನ ರಾಜ್ಯಾಧ್ಯಕ್ಷರ ಬಗ್ಗೆ ಅಸಮಾಧಾನ ಹೊರ ಹಾಕಿದರಾ ಸಿಟಿ ರವಿ…? ವಿಜಯೇಂದ್ರ ಬಗ್ಗೆ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಿನ್ನೆಯಷ್ಟೇ ಹೊಸ ನೇಮಕವಾಗಿದೆ. ಯಡಿಯೂರಪ್ಪ ಅವರ ಪುತ್ರನ ನೇಮಕದಿಂದಾಗಿ ಹಲವಾರು ಮಂದಿ ಖುಷಿಯಾಗಿದ್ದಾರೆ‌. ಶುಭಾಶಯಗಳ ಸುರಿಮಳೆಯೇ ಸುರಿಯುತ್ತಿದೆ. ಇದರ ನಡುವೆ ಹಲವರಿಗೆ ಬೇಸರವೂ ಆಗಿದೆ. ಅದರಲ್ಲಿ ಸಿಟಿ ರವಿ ಕೂಡ ಒಬ್ಬರು. ಬಿವೈ ವಿಜಯೇಂದ್ರ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

ಇಂದು ಕೆಂಪೇಗೌಡ ಇಂಟರ್ ನ್ಯಾಶನಲ್ ಏರ್ಪೋರ್ಟ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಟಿ ರವಿ ಅವರು, ವಿಜಯೇಂದ್ರ ಅವರನ್ನು ಪಕ್ಷ ನೇಮಕ ಮಾಡಿದೆ. ವೈಚಾರಿಕ ಭದ್ರತೆಯ ಜೊತೆಗೆ ಪಕ್ಷ ಕಟ್ಟಿ ಬೆಳೆಸುವ ಕೆಲಸವನ್ನು ಅವರು ಮಾಡಬೇಕಿದೆ ಪ್ರಮುಖವಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಕ್ಕೆ 28 ಸ್ಥಾನ ಗೆಲ್ಲಿಸುವ ಹೊಣೆಗಾರಿಕೆ ಅವರ ಮೇಲಿದೆ. ಈಗ ನಾನೊಬ್ಬ ಸಾಮಾನ್ಯ ಕಾರ್ಯಕರ್ತ.

 

ಅಸಮಾಧಾನದ ಬಗ್ಗೆ ನಾನು ಈಗ ಏನು ಮಾತನಾಡಲ್ಲ. 35 ವರ್ಷದಿಂದ ರಾಜಕೀಯ ಕ್ಷೇತ್ರದಲ್ಲಿದ್ದೀನಿ. ಬೂತ್ ಅಧ್ಯಕ್ಷನಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯವರೆಗೂ ಕಾರ್ಯ ನಿರ್ವಹಿಸಿದ್ದೀನಿ. ಈಗ ನಾನು ಏನು ಮಾತನಾಡಲ್ಲ. ಈಗಾಗಲೇ ಬಹಳ ಮಾತನಾಡಿದ್ದೇನೆ. ಈಗ ನಾನೇನಾದರೂ ಮಾತನಾಡಿದರೆ, ನಮ್ಮ ಮಾತೆ ನಮಗೆ ತಿರುಗು ಬಾಣವಾಗುತ್ತದೆ ಎಂದಿದ್ದಾರೆ. ಈ ಮೂಲಕ ವಿಜಯೇಂದ್ರ ಅವರ ಮೇಲೆ ಅಸಮಾಧಾನ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

error: Content is protected !!