ಮೂಡಾ ಹಾಗೂ ವಾಲ್ಮೀಕಿ ಹರಗರಣವನ್ನು ವಿರೋಧಿಸಿ ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆ ಹೊರಟಿದ್ದಾರೆ. ಆದರೆ ಈ ಪಾದಯಾತ್ರೆಗೆ ಜೆಡಿಎಸ್ ಬೆಂಬಲವಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ್ದರು. ಜೆಡಿಎಸ್ ಬೆಂಬಲ ನೀಡದೆ ಹೋದರು ಪಾದಯಾತ್ರೆಯನ್ನು ಮುಂದುವರೆಸಿ ಎಂದು ಅಮಿತ್ ಶಾ ಸಲಹೆ ನೀಡಿದ್ದರು. ಆದರೆ ಇದೀಗ ಕುಮಾರಸ್ವಾಮಿ ಅವರು ಒಪ್ಪಿಗೆ ನೀಡಿದ್ದಾರೆ, ಪಾದಯಾತ್ರೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸಂಧಾನ ಮಾಡಿದ್ದು, ಪಾದಯಾತ್ರೆಗೆ ಬರಲು ಒಪ್ಪಿದ್ದಾರೆ ಎನ್ನಲಾಗಿದೆ. ಇದರ ನಡುವೆ ಒಂದು ಷರತ್ತನ್ನು ವಿಧಿಸಿದ್ದಾರೆ ಎನ್ನಲಾಗಿದೆ. ಆ ಷರತ್ತು ಒಪ್ಪಿದರೆ ಮಾತ್ರ ಪಾದಯಾತ್ರೆಯಲ್ಲಿ ಭಾಗವಹಿಸುತ್ತೇನೆ ಎಂದಿದ್ದಾರಂತೆ. ಹಾಸನದ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಅವರು ಪಾದಯಾತ್ರೆಗೆ ಬಾರದೆ ಇದ್ದರೆ ಮಾತ್ರ ನಾನು ಬರುತ್ತೇನೆ ಎಂದಿದ್ದಾರಂತೆ. ಈ ಬಗ್ಗೆ ಬಿಜೆಪಿ ನಾಯಕರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೋ ಅದರ ಮೇಲೆ ಕುಮಾರಸ್ವಾಮಿ ಅವರು ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.
ಇನ್ನು ಬಿಜೆಪಿಯ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಈ ಬಗ್ಗೆ ಮಾತನಾಡಿ, ಪಾದಯಾತ್ರೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ವಾಲ್ಮೀಕಿ ಹಾಗೂ ಮೂಡಾ ಹಗರಣದಲ್ಲಿ ಬಾರಿ ಭ್ರಷ್ಟಾಚಾರ ಆಗಿದೆ. ಸಿಎಂ ಕುಟುಂಬಸ್ಥರಿಗೆ 14 ಮೂಡಾ ಸೈಟುಗಳು ಬಂದಿವೆ. ಅಷ್ಟೇ ಅಲ್ಲ ಅಧಿಕಾರಕ್ಕೆ ಬಂದ ಮೇಲೆ ತಮ್ಮ ಬೆಂಬಲಿಗರಿಗೆ ಕಾಂಗ್ರೆಸ್ ನಾಯಕರು 4 ಸಾವಿರ ಕೋಟಿ ಮೌಲ್ಯದ ಸೈಟುಗಳನ್ನು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದ ಬಡವರಿಗೆ ಅನ್ಯಾಯವಾಗಿದೆ. ಇದಕ್ಕೆ ಹೋರಾಟ ಮಾಡುತ್ತೇವೆ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















