ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಕಲಬುರಗಿ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕೆಂದು ವಿಪಕ್ಷಗಳೆಲ್ಲಾ ಕಾಂಗ್ರೆಸ್ ಜೊತೆಗೆ ಕೈಜೋಡಿಸಿದ್ದು, ಇಂಡಿಯಾ ಕೂಟವನ್ನು ರಚಿಸಿಕೊಂಡಿವೆ. ಇಂಡಿಯಾ ಮೈತ್ರಿಕೂಟದಿಂದ ಪ್ರಧಾನಿ ಯಾರಾಗುತ್ತಾರೆ ಎಂಬ ಚರ್ಚೆಯೂ ಸಾಕಷ್ಟು ನಡೆಯುತ್ತಿದೆ. ಇದೇ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕ್ ಖರ್ಗೆ, ತಮ್ಮ ತಂದೆಯ ಹೆಸರನ್ನೇ ಪ್ರಸ್ತಾಪ ಮಾಡಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಪ್ರಧಾನಿ, ಉಪಪ್ರಧಾನಿ ಯಾರಾಗಬೇಕು ಎಂಬ ವಿಚಾರ ಬಂದಾಗ ಆ ಸಮಾಜದ ನಾಯಕರಿಗೆ ಜಾತಿಯ ಲೇಪನ ಹಚ್ಚುವುದು ತಪ್ಪು. ಅವರೂ ಸಮರ್ಥರಲ್ಲವಾ..? ಆ ಸಮುದಾಯದವರ ದಕ್ಷತೆ ನೋಡುವುದಿಲ್ಲವಾ..? ನರೇಂದ್ರ ಮೋದಿ ಅವರಿಗೆ ಸ್ಥಾನ ಮಾನ ನೀಡುವಾಗ ಅವರ ಜಾತಿ ಕೇಳಲಿಲ್ಲ. ಅವರು ಎಷ್ಟು ಸಮರ್ಥರು ಎನ್ನುವುದನ್ನು ಹಲವು ವರ್ಷಗಳಿಂದ ನೋಡುತ್ತಿದ್ದೇವೆ ಎಂದಿದ್ದಾರೆ.

ಮೈತ್ರಿಕೂಟದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಂಸತ್ತಿಗೆ ಕಳುಹಿಸುವುದು ನಮ್ಮ ಉದ್ದೇಶ. ಯಾರು ಪ್ರಧಾನಿ, ಯಾರೂ ಉಪಪ್ರಧಾನಿ ಎಂಬ ಸವಾಲು ಸದ್ಯಕ್ಕೆ ನಮ್ಮ ಮುಂದೆ ಇಲ್ಲ. ಕಾಂಗ್ರೆಸ್ 20-25 ಸ್ಥಾನವನ್ನು ಗೆಲ್ಲಲಿದೆ ಎಂದಿದ್ದಾರೆ. ಈ ಮೂಲಕ ತಮ್ಮ ತಂದೆಯ ಸಾಮರ್ಥ್ಯದ ಬಗ್ಗೆಯೂ ಪರೋಕ್ಷವಾಗಿ ಮಾತನಾಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್