ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸ್ಯಾಂಡಲ್ ವುಡ್ ನಲ್ಲೀಗ ಕಿಚ್ಚನ ಹೆಸರೇಳಿ ವಂಚನೆ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅದರಲ್ಲೂ ದೊಡ್ಡ ಹೆಸರಿರುವ ನಂದ ಕಿಶೋರ್ ಈ ಮೋಸ ಮಾಡಿದ್ದಾರೆ ಎನ್ನಲಾಗಿದೆ. ಯುವನಟ ಶಬರೀಶ್ ಶೆಟ್ಟಿ ಎನ್ನುವವರು ಈ ಆರೋಪ ಮಾಡಿದ್ದಾರೆ. ನಾನು ಹಣ ಕೇಳಿದಾಗೆಲ್ಲ ಸುದೀಪ್ ಸರ್ ಹೆಸರೇಳಿ ಯಾಮಾರಿಸುತ್ತಿದ್ದಾರೆ ಎಂದಿದ್ದಾರೆ.
ಅಷ್ಟಕ್ಕೂ ಏನಿದು ಆರೋಪ, 2016ರಲ್ಲಿ ನಂದ ಕಿಶೋರ್ ನನಗೆ ಪರಿಚಯವಾಗಿದ್ರು. ಜಿಮ್ ಒಂದರಲ್ಲಿ ಪರಿಚಯವಾದ್ರು. ನಾನು ನಂದ ಕಿಶೋರ್ ಅವರಿಗೆ ಆ ಸಮಯದಲ್ಲಿ 22 ಲಕ್ಷ ಹಣ ಕೊಟ್ಟಿದ್ದೀನಿ. ಆದರೆ 9 ವರ್ಷಗಳಿಂದ ನಂದ ಕಿಶೋರ್ ಹಣವನ್ನ ಹಿಂದಿರುಗಿಸುತ್ತಿಲ್ಲ. ಹಣ ಕೇಳಿದರೆ ಧಮ್ಕಿ ಹಾಕ್ತಾರೆ. ಅಷ್ಟೇ ಅಲ್ಲ ಹಣ ಕೇಳಿದಾಗೆಲ್ಲ ಸುದೀಪ್ ಸರ್ ಹೆಸರು ಹೇಳಿ ಯಾಮಾರಿಸುತ್ತಿದ್ದಾರೆ.
ಸುದೀಪ್ ಸರ್ ಸಿನಿಮಾದಲ್ಲಿ ಅವಕಾಶ ಕೊಡುತ್ತೇನೆ ಎಂದು ಹೇಳಿ ಯಾಮಾರಿಸುತ್ತಿದ್ದಾರೆ. ಆದ್ರೆ ಇತ್ತ ನನಗೆ ಹಣವೂ ಕೊಡ್ತಿಲ್ಲ, ಸಿನಿಮಾದಲ್ಲಿ ಅವಕಾಶವನ್ನು ಕೊಡ್ತಾ ಇಲ್ಲ. ನಾನು ಸಿಸಿಎಲ್ ನಲ್ಲಿ ಆಡುವ ಕನಸು ಕಟ್ಟಿಕೊಂಡಿದ್ದೆ. ಕೆಸಿಸಿ ಟೂರ್ನಿಯಲ್ಲಿ ನಾನು ಎರಡು ಸೀಸನ್ ಆಡಿದ್ದೇನೆ. ಹಣ ಕೇಳಿದರೆ ನಿನ್ನ ಕೆಸಿಸಿಯಿಂದ ಹೊರ ಹಾಕ್ತೀನಿ ಅಂತ ಬೆದರಿಕೆ ಹಾಕುತ್ತಿದ್ದರು. ನಾನು ಸುದೀಪ್ ಸರ್ ಜೊತೆಗೆ ಕ್ರಿಕೆಟ್ ಆಡುವ ಆಸೆಯಿಂದ ಸುಮ್ಮನಾಗಿದ್ದೆ. ಈಗ ನನ್ನ ರಾಮಧೂತ ಸಿನಿಮಾ ಶೂಟಿಂಗ್ ಕಂಪ್ಲೀಟ್ ಆಗಿದೆ. ಸಿನಿಮಾ ರಿಲೀಸ್ ಮಾಡಲು ನನ್ನ ಬಳಿ ಹಣವಿಲ್ಲ. ನನ್ನ ಹಣ ವಾಪಸ್ ಕೊಎಇ ಅಂದ್ರೆ ಏನ್ ಮಾಡ್ಕೊಳ್ತಿಯೋ ಮಾಡ್ಕೊ ಎನ್ನುತ್ತಾರೆ ಎಂದು ನೋವು ಹೊರ ಹಾಕಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್