Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟಿಕೆಟ್ ಗಾಗಿ ದೆಹಲಿಯಿಂದಾನೇ ಅಸ್ತ್ರ ಶುರು ಮಾಡಿದರಾ ಸುಮಲತಾ..?

Facebook
Twitter
Telegram
WhatsApp

ನವದೆಹಲಿ: ಚುನಾವಣೆ ಎಂದಾಗ ಮಂಡ್ಯ ನೆಲ ಎಲ್ಲಾ ಕಡೆಯೂ ಹೈಲೇಟ್ ಆಗುತ್ತದೆ. ಬಿಸಿಬಿಸಿ ಚರ್ಚೆಗೆ ಗ್ರಾಸವಾಗುತ್ತದೆ. ಕಳೆದ ವಿಧಾನಸಭಾ ಚುನಾವಣೆಯಲ್ಲೂ ಸಾಕಷ್ಟು ಗಮನ ಸೆಳೆದುತ್ತು. ಈಗ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ. ಇಂಥ ಸಮಯದಲ್ಲೂ ಮಂಡ್ಯ ರಣಕಣ ಹೆಚ್ಚು ಸದ್ದು ಮಾಡುತ್ತಿದೆ. ಅದರಲ್ಲೂ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡ ಬಳಿಕವಂತೂ, ಮಂಡ್ಯದ ಬಗ್ಗೆ ಜನ ಮಾತನಾಡದ ದಿನಗಳೇ ಇಲ್ಲ.

ಬಿಜೆಪಿ ಜೊತೆಗೆ ಕೈ ಜೋಡಿಸಿದ ಮೇಲಂತೂ ಮಾಜಿ ಸಿಎಂ ಕುಮಾರಸ್ವಾಮಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿದ್ದಾರೆ. ಮುನಿಸು ತೋರಿದ ಬಿಜೆಪಿ ನಾಯಕರನ್ನು ಸಮಾಧಾನಗೊಳಿಸಿ, ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಅದರಲ್ಲೂ ಬಿಡದಿಯ ತೋಟದ ಮನೆ, ರಾಜಕೀಯ ಚರ್ಚೆಗೆ ಒಳ್ಳೆ ಸ್ಥಳವಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಕಾರಣ, ಮಂಡ್ಯ ಕ್ಷೇತ್ರವನ್ನು ಬಿಜೆಪಿ, ಜೆಡಿಎಸ್ ಗೆ ಬಿಟ್ಟುಕೊಡಬೇಕಾದ ಪರಿಸ್ಥಿತಿ ಇದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸಾಕಷ್ಟು ಸವಾಲುಗಳನ್ನು ಎದುರಿಸಿದ ಕೊನೆಗೆ ಸುಮಲತಾ ಗೆದ್ದಿದ್ದರು. ಆದರೆ ಈಗ ಬಿಜೆಪಿಗೆ ಸೇರಿರುವ ಸುಮಲತಾಗೆ, ಮಂಡ್ಯದಿಂದ ಟಿಕೆಟ್ ಕೈತಪ್ಪುವ ಸಾಧ್ಯತೆಯೇ ಹೆಚ್ಚಾಗಿದೆ. ಇದರ ನಡುವೆ ಸುಮಲತಾ ಅವರು ನೇರ ದೆಹಲಿಯಿಂದಾನೇ ಟಿಕೆಟ್ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ.

 

 

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ ನಡ್ಡಾ ಅವರನ್ನು ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ.ಎಲ್‌. ಸಂತೋಷ್‌ ಅವರನ್ನು ಅನೌಪಚಾರಿಕವಾಗಿ ಇಂದು ಭೇಟಿ ಭೇಟಿ ಮಾಡಿ ಮಂಡ್ಯ ಕ್ಷೇತ್ರ ಹಾಗೂ ಲೋಕಸಭಾ ಚುನಾವಣೆ ಕುರಿತಂತೆ ಚರ್ಚಿಸಲಾಯಿತು. ತಮ್ಮ ಅಮೂಲ್ಯ ಸಮಯವನ್ನು ನೀಡಿ, ನನ್ನ ಮಾತುಗಳನ್ನು ಆಲಿಸಿದ ಶ್ರೀ ನಡ್ಡಾ ಜಿ ಅವರಿಗೂ ಶ್ರೀ ಸಂತೋಷ್ ಜಿ ಅವರಿಗೂ ಧನ್ಯವಾದಗಳು. ತಮ್ಮ ಸಹಕಾರದ ಮಾತುಗಳಿಗೆ ಮತ್ತೊಮ್ಮೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!