Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಚಿವ ಸಂಪುಟ ಸಭೆಯಲ್ಲಿ ಪರೋಕ್ಷವಾಗಿ RSS ಗೆ ನಿರ್ಬಂಧ ಹೇರಿತಾ..?

---Advertisement---

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ಈ ಸಂಪುಟ ಸಭೆಯಲ್ಲಿ RSSಗೆ ಸಂಬಂಧಿಸಿದಂತೆ ಒಂದಷ್ಟು ಚರ್ಚೆಗಳಾಗಿವೆ. ಇತ್ತೀಚೆಗೆ ಪ್ರಿಯಾಂಕ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಆರ್ಎಸ್ಎಸ್ ಕಾರ್ಯಕ್ರಮಗಳ ವಿಚಾರಕ್ಕೆ ಪತ್ರ ಬರೆದಿದ್ದರು. ಸರ್ಕಾರಿ ಜಾಗದಲ್ಲಿ ಆರ್ಎಸ್ಎಸ್ ಕಾರ್ಯಕ್ರಮಗಳನ್ನು ನಡೆಸುವುದನ್ನು ನಿಷೇಧಿಸಬೇಕು ಹಾಗೇ ಸರ್ಕಾರಿ ನೌಕರರು ಈ ಕಾರ್ಯಕ್ರಮಗಳಲ್ಲಿ ಭಾಗಿಯಾಗಬಾರದೆಂದು. ಈ ಸಂಬಂಧ ಪರೋಕ್ಷವಾಗಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

2013ರ ಬಿಜೆಪಿ ಸರ್ಕಾರದ ಆದೇಶವನ್ನೇ ಮುಂದಿಟ್ಟು ಸಿದ್ದರಾಮಯ್ಯ ಸರ್ಕಾರ, ಇದೀಗ ತಮಿಳುನಾಡು ಸರ್ಕಾರ ಕೈಗೊಂಡಿರುವ ನಿರ್ಧಾರದಂತೆ ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನು ನಡೆಸಲು ಪೂರ್ವಾನುಮತಿ ಕಡ್ಡಾಯ ಮಾಡಿ ಹೊಸ ನಿಯಮ ತರುವುದಕ್ಕೆ ಮುಂದಾಗಿದೆ. ತನ್ನ ತೀರ್ಮಾನದಲ್ಲಿ ಎಲ್ಲಿಯೂ ಆರ್ ಎಸ್ ಎಸ್ ಪದ ಬಳಕೆ ಮಾಡದೆ ಸರ್ಕಾರ, ಖಾಸಗಿ ಸಂಸ್ಥೆಗಳು ಎಂದು ಉಲ್ಲೇಖ ಮಾಡಿ ಜಾಣ್ಮೆ ತೋರಿಸಿದೆ. ಈ ನಿಯಮ ಜಾರಿಯಾದ್ರೆ ಆರ್ ಎಸ್ಎಸ್ ಮಾತ್ರವಲ್ಲ, ಖಾಸಗಿ ಸಂಘ ಸಂಸ್ಥೆಗಳ, ಸಂಘಟನೆಗಳ ಕಾರ್ಯಕ್ರಮವೂ ಸರ್ಕಾರಿ ಜಾಗದಲ್ಲಿ ನಡೆಯುವುದಿಲ್ಲ.

ಕ್ಯಾಬಿನೆಟ್ ಬಳಿಕ ಮಾತನಾಡಿದ ಸಚುವ ಪ್ರಿಯಾಂಕ್ ಖರ್ಗೆ, ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮಗಳನ್ನು ಮಾಡಲು ಅನುಮತಿ ಪಡೆಯಬೇಕು. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಯಾವುದೇ ಸಂಘಟನೆಗಳು, ಧರ್ಮದವರು ಅನುಮತಿ ಪಡೆಯಲೇಬೇಕು. ಈ ಸಂವಂಧ ಹೊಸ ನಿಯಮಗಳನ್ನು ಕಾನೂನಾತ್ಮಕವಾಗಿ ಜಾರಿಗರ ತರಲಾಗುವುದು. ಕಾನೂನು ನಮಗೂ, ನಿಮಗೂ, ಎಲ್ಲರಿಗೂ ಒಂದೇ. ಅನುಮತಿ ಪಡೆದು ಕಾರ್ಯಕ್ರಮ ಮಾಡಲು ಏನು ತೊಂದರೆ ಎಂದು ಪ್ರಶ್ನಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...