Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

KCETನಲ್ಲಿ ರ‍್ಯಾಂಕ್ ಕಡಿಮೆಯಾಯಿತೇ? ಆತಂಕ ಬೇಡ; ಎಂಜಿನಿಯರಿಂಗ್ ಪ್ರವೇಶಕ್ಕೆ ಇಲ್ಲಿವೆ ಪರ್ಯಾಯ ಮಾರ್ಗಗಳು

---Advertisement---

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) 2026ರ ಫಲಿತಾಂಶ ಜೂನ್ 6ರಂದು ಪ್ರಕಟವಾಗಿದ್ದು, ಕೌನ್ಸೆಲಿಂಗ್ ಹಾಗೂ ಆಯ್ಕೆ ಭರ್ತಿ ಪ್ರಕ್ರಿಯೆ ಜೂನ್ 10ರಿಂದ ಆರಂಭವಾಗಲಿದೆ. ಉತ್ತಮ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳು ಮೊದಲ ಹಂತದಲ್ಲೇ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆಯಲಿದ್ದಾರೆ. ಆದರೆ ನಿರೀಕ್ಷಿತ ರ‍್ಯಾಂಕ್ ಸಿಗದ ವಿದ್ಯಾರ್ಥಿಗಳು ಅಥವಾ ಕೆಸಿಇಟಿಯಲ್ಲಿ ಉತ್ತಮ ಸಾಧನೆ ಮಾಡದವರು ನಿರಾಶರಾಗುವ ಅಗತ್ಯವಿಲ್ಲ.ಎಂಜಿನಿಯರಿಂಗ್ ಶಿಕ್ಷಣದ ಕನಸನ್ನು ನನಸಾಗಿಸಿಕೊಳ್ಳಲು ವಿದ್ಯಾರ್ಥಿಗಳ ಮುಂದೆ ಇನ್ನೂ ಹಲವು ಪರ್ಯಾಯ ಅವಕಾಶಗಳು ಲಭ್ಯವಿವೆ.

COMEDK ಕೌನ್ಸೆಲಿಂಗ್ ಉತ್ತಮ ಆಯ್ಕೆ
KCETಗೆ ಪ್ರಮುಖ ಪರ್ಯಾಯವಾಗಿ COMEDK UGET ಪರಿಗಣಿಸಲಾಗುತ್ತದೆ. ಕರ್ನಾಟಕದ ಖಾಸಗಿ ವೈದ್ಯಕೀಯ, ಎಂಜಿನಿಯರಿಂಗ್ ಹಾಗೂ ದಂತ ಕಾಲೇಜುಗಳ ಒಕ್ಕೂಟ ನಡೆಸುವ ಈ ಪರೀಕ್ಷೆಯ ಫಲಿತಾಂಶ ಈಗಾಗಲೇ ಪ್ರಕಟವಾಗಿದ್ದು, ರಾಜ್ಯದ 150ಕ್ಕೂ ಹೆಚ್ಚು ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶದ ಅವಕಾಶ ಒದಗಿಸುತ್ತದೆ.COMEDK ಕೌನ್ಸೆಲಿಂಗ್ ಮೂಲಕ ವಿದ್ಯಾರ್ಥಿಗಳು ಆರ್‌ವಿ ಕಾಲೇಜ್ ಆಫ್ ಎಂಜಿನಿಯರಿಂಗ್, ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್, ಎಂಎಸ್ ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸೇರಿದಂತೆ ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಸೀಟು ಪಡೆಯಲು ಅವಕಾಶವಿದೆ.

ಮ್ಯಾನೇಜ್‌ಮೆಂಟ್ ಕೋಟಾದಡಿ ನೇರ ಪ್ರವೇಶ
KCET ಹಾಗೂ COMEDK ಎರಡರಲ್ಲೂ ಉತ್ತಮ ರ‍್ಯಾಂಕ್ ಪಡೆಯದ ವಿದ್ಯಾರ್ಥಿಗಳಿಗೆ ಮ್ಯಾನೇಜ್‌ಮೆಂಟ್ ಕೋಟಾ ಮತ್ತೊಂದು ಮಾರ್ಗವಾಗಿದೆ. ಅನೇಕ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಈ ಕೋಟಾದಡಿ ವಿದ್ಯಾರ್ಥಿಗಳಿಗೆ ನೇರ ಪ್ರವೇಶ ನೀಡುತ್ತವೆ.
ಈ ಪ್ರಕ್ರಿಯೆಯಲ್ಲಿ ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆಯ ಅಂಕಗಳ ಜೊತೆಗೆ ದ್ವಿತೀಯ ಪಿಯುಸಿಯ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ ವಿಷಯಗಳಲ್ಲಿ ಪಡೆದಿರುವ ಅಂಕಗಳನ್ನೂ ಪರಿಗಣಿಸಲಾಗುತ್ತದೆ. ಪ್ರವೇಶದ ಮಾನದಂಡಗಳು ಕಾಲೇಜಿನಿಂದ ಕಾಲೇಜಿಗೆ ಬದಲಾಗುತ್ತವೆ.

COMEDK ಕೌನ್ಸೆಲಿಂಗ್ ಈಗಾಗಲೇ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರ್ಯಾಯ ಪ್ರವೇಶ ಮಾರ್ಗಗಳ ಕುರಿತು ಶೀಘ್ರ ನಿರ್ಧಾರ ಕೈಗೊಳ್ಳುವುದು ಸೂಕ್ತ. ಕೌನ್ಸೆಲಿಂಗ್ ಪ್ರಕ್ರಿಯೆ ಮುಂದುವರಿದಂತೆ ಖಾಸಗಿ ಕಾಲೇಜುಗಳು ಲಭ್ಯವಿರುವ ಸೀಟುಗಳನ್ನು ಭರ್ತಿ ಮಾಡಲು ಆರಂಭಿಸುತ್ತವೆ.ಹೀಗಾಗಿ KCETನಲ್ಲಿ ನಿರೀಕ್ಷಿತ ರ‍್ಯಾಂಕ್ ಸಿಗದಿದ್ದರೂ ಎಂಜಿನಿಯರಿಂಗ್ ಶಿಕ್ಷಣದ ಕನಸು ಕೈಚೆಲ್ಲುವ ಅಗತ್ಯವಿಲ್ಲ. ಸರಿಯಾದ ಮಾಹಿತಿ ಹಾಗೂ ಸಮಯೋಚಿತ ನಿರ್ಧಾರದಿಂದ ಉತ್ತಮ ಕಾಲೇಜಿನಲ್ಲಿ ಪ್ರವೇಶ ಪಡೆಯುವ ಅವಕಾಶ ಇನ್ನೂ ತೆರೆದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now