Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬರ ಪರಿಹಾರ : ನಾವೂ ಕೇಳುತ್ತಿರುವ ಭಿಕ್ಷೆಯಲ್ಲ ಎಂದ ಸಚಿವ ದಿನೇಶ್ ಗುಂಡೂರಾವ್

Facebook
Twitter
Telegram
WhatsApp

ಬೆಂಗಳೂರು: ಬರ ಅಧ್ಯಯನ ನಡೆದರು ಕೂಡ ಕೇಂದ್ರದಿಂದ ಒಂದು ಪೈಸೆಯೂ ಪರಿಹಾರ ಸಿಕ್ಕಿಲ್ಲ. ಈ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಬರ ಪರಿಹಾರ ಕೊಡುವುದು ಕೇಂದ್ರ ಸರ್ಕಾರದ ಕರ್ತವ್ಯ. ನಾವೂ ಕೇಳುತ್ತಿರುವುದು ಭಿಕ್ಷೆಯಲ್ಲ ಎಂದಿದ್ದಾರೆ.

 

ಯಡಿಯೂರಪ್ಪನವರೆ, ಮಹಾರಾಷ್ಟ್ರ,ತಮಿಳುನಾಡು ಬಿಟ್ಟರೆ ಅತಿ‌ ಹೆಚ್ಚು GST ಕೊಡುಗೆಯಲ್ಲಿ ಕರ್ನಾಟಕವೇ ಮೂರನೆಯದು‌. ನಮ್ಮಿಂದ ಹೆಚ್ಚಿನ ತೆರಿಗೆ ಪಾಲು ಪಡೆದಿರುವ ಮೋದಿ ಸರ್ಕಾರ ನಮ್ಮ ರಾಜ್ಯಕ್ಕೆ ಏನು ಕೊಡುಗೆ ನೀಡಿದೆ.? ಹೇಳಿ ನೋಡೋಣ. ಬರ ಪರಿಹಾರಕ್ಕೆ ಹಣ ನೀಡುವುದು ಕೇಂದ್ರ ಸರ್ಕಾರದ ಕರ್ತವ್ಯವೇ ಹೊರತು, ಅದು ನಾವು ಕೇಳಿತ್ತಿರುವ ಭಿಕ್ಷೆಯಲ್ಲ.

 

ಮಾನ್ಯ ಯಡಿಯೂರಪ್ಪನವರೆ, ನಿಮ್ಮ ನೇತೃತ್ವದಲ್ಲಿ ಬರ ಅಧ್ಯಯನ ಮಾಡುತ್ತಿರುವುದನ್ನು ನಾನು ಶ್ಲಾಘಿಸುತ್ತೇನೆ. ನಿಮ್ಮ ಮೂಲಕವಾದರೂ ರಾಜ್ಯದ ಜನರ ಸಂಕಷ್ಟ ಮೋದಿಯವರಿಗೆ ಅರಿವಾಗಲಿ. ಈಗಾಗಲೇ ಬರದಿಂದ 31 ಸಾವಿರ ಕೋಟಿಗೂ ಹೆಚ್ಚು ನಷ್ಟ ಸಂಭವಿಸಿದೆ‌. SDRF&NDRF ನಿಯಮದ ಅನುಸಾರ 17,900 ಕೋಟಿ ಪರಿಹಾರ ರಾಜ್ಯಕ್ಕೆ ಬರಬೇಕು‌. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೇಂದ್ರಕ್ಕೆ ಮನವಿ ಕೂಡ ಸಲ್ಲಿಸಿದೆ‌. ಈ ಪರಿಹಾರದ ಹಣ ನಿಮಗೆ ಕೊಡಿಸಲು ಸಾಧ್ಯವೇ.?

 

ಯಡಿಯೂರಪ್ಪನವರೆ, ಪುಕ್ಕಟೆ ಭಾಗ್ಯಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದೆ ಎಂದು ಹೇಳಿದ್ದೀರಿ‌. ಜನರಿಗೆ ಆರ್ಥಿಕ ಸ್ವಾತಂತ್ರ್ಯ ಕಲ್ಪಿಸುವುದನ್ನು ನೀವು ಪುಕ್ಕಟೆ ಭಾಗ್ಯ ಎಂದು ಹೇಳಿರುವುದು ಖೇದಕರ‌. ಹೋಗಲಿ, ನಿಮ್ಮ ಪ್ರಕಾರ ಪುಕ್ಕಟೆ ಭಾಗ್ಯಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದೆ ಎಂದಿಟ್ಟುಕೊಳ್ಳೋಣ. ಆದರೆ ನಮ್ಮ ರಾಜ್ಯದಿಂದ ಅತಿ ಹೆಚ್ಚು ತೆರಿಗೆ ಪಡೆದು, ನಮ್ಮ ರಾಜ್ಯಕ್ಕೆ ನಿಮ್ಮ ಮೋದಿಯವರು ಒ‌ಂದು ನಯಾಪೈಸೆ ಪರಿಹಾರ ಕೊಡದಷ್ಟು ಅಶಕ್ತರಾಗಿದ್ದಾರೆ. ಹಾಗಾದರೆ ಮೋದಿ ಸರ್ಕಾರ ದಿವಾಳಿಯಾಗಿದೆ ಎಂದರ್ಥವಲ್ಲವೇ.?ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ್ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ನೇಹಾ ಕೊಲೆ ಕೇಸ್ ಸಿಐಡಿಗೆ ಒಪ್ಪಿಸಿದ ಸರ್ಕಾರ : ಬೇಸರ ಮಾಡಿಕೊಂಡ ರಂಭಾಪುರಿ ಶ್ರೀಗಳು

ಹುಬ್ಬಳ್ಳಿ: ನೇಹಾಳ ಕೊಲೆಯಾದ ಮೇಲೆ ನಿರಂಜನ ಹೀರೆಮಠ ಅವರಿಗೆ ಸಾಂತ್ವನ ಹೇಳಲು ಇಂದು ರಂಭಾಪುರಿ ಶ್ರೀಗಳು ಭೇಟಿ ನೀಡಿದ್ದಾರೆ. ಮನೆಗೆ ಬಂದು ಧೈರ್ಯ ಹೇಳಿ, ಒಂದಷ್ಟು ಸಮಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಕೇಸನ್ನು

error: Content is protected !!