Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

Facebook
Twitter
Telegram
WhatsApp

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು ನೀಡಿದ್ದಾರೆ. ಸ್ವಾಮೀಜಿಗಳು ಸಲ್ಲಿಕೆ ಮಾಡಿರುವ ಆಸ್ತಿಯ ವಿವರದ ಪ್ರಕಾರ ದಿಂಗಾಲೇಶ್ವರ ಸ್ವಾಮೀಜಿಯ ಬಳಿ ಒಟ್ಟು 9.74 ಕೋಟಿ ರೂಪಾಯಿ ಇದೆ.

 

ದಿಂಗಾಲೇಶ್ವರ ಸ್ವಾಮೀಜಿ ನೀಡಿರುವ ಮಾಹಿತಿ ಪ್ರಕಾರ, 1.22 ಕೋಟಿ ರೂಪಾಯಿ ಚರಾಸ್ಥಿಯಾಗಿದ್ದರೆ, 8.52 ಕೋಟಿ ರೂಪಾಯಿ ಸ್ಥಿರಾಸ್ತಿಯಾಗಿದೆ. 39.68 ಲಕ್ಷ ರೂಪಾಯಿ ಸಾಲ ಇದೆ. ಕೈಯಲ್ಲಿ 1 ಲಕ್ಷದ 25 ಸಾವಿರ ರೂಪಾಯಿ ನಗದು ಇದೆ. ಹಲವು ಬ್ಯಾಂಕ್ ಗಳಲ್ಲಿ ಹನ್ನೊಂದು ಲಕ್ಷ ಹಣ ಇಡಲಾಗಿದೆ. ಜೊತೆಗೆ 4.75 ಲಕ್ಚದ ಶೇರುಗಳನ್ನು ವಿವಿಧ ಸಹಕಾರಿ ಬ್ಯಾಂಕ್ ಗಳಲ್ಲಿ ಬಾಂಡ್ ಇಡಲಾಗಿದೆ. ಸ್ವಾಮೀಜಿ ಮೇಲೆ ಮೂರು ಪ್ರಕರಣಗಳಿವೆ.

 

ಎರಡು ಟೊಯೊಟೊ ಇನೋವಾ ಕಾರು, ಒಂದು ಟ್ರಾಕ್ಟರ್‌ ಹಾಗೂ ಒಂದು ಬಸ್‌ ಅನ್ನು ಹೊಂದಿದ್ದಾರೆ. ಜೊತೆಗೆ 4.35 ಲಕ್ಷ ರೂ. ಮೌಲ್ಯದ 7 ಕೆಜಿ 820 ಗ್ರಾಂ ಬೆಳ್ಳಿ ಹೊಂದಿದ್ದು, 1,17 ಲಕ್ಷ ರೂ. ಮೌಲ್ಯದ 18.9 ಗ್ರಾಂ ಚಿನ್ನವನ್ನು ಹೊಂದಿದ್ದಾರೆ. ಈ ಮೂಲಕ ಒಟ್ಟು 1.22 ಕೋಟಿ ರೂ. ಚರಾಸ್ತಿಯನ್ನು ದಿಂಗಾಲೇಶ್ವರ ಸ್ವಾಮೀಜಿ ಘೋಷಿಸಿಕೊಂಡಿದ್ದಾರೆ. 23 ಎಕರೆ 17 ಗುಂಟೆ ಕೃಷಿ ಭೂಮಿಯನ್ನು ಹೊಂದಿದ್ದು, 19 ಕಡೆ ಕೃಷಿಯೇತರ ಭೂಮಿ ಹೊಂದಿದ್ದಾರೆ. ಜೊತೆಗೆ ಶಾಲಾ ಕಟ್ಟಡ ಕೂಡ ಇದ್ದು, ಒಟ್ಟು, 8.52 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಹೊಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!