Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ದಿಂಗಾಲೇಶ್ವರ ಸ್ವಾಮೀಜಿಗೆ ಒತ್ತಾಯ

Facebook
Twitter
Telegram
WhatsApp

ಧಾರವಾಡ: ಈಗಾಗಲೇ ಲೋಕಸಭಾ ಚುನಾವಣೆಯ ಕಣ ಬಿಸಿಯಾಗಿದೆ. ಧಾರಾವಾಡ ಕ್ಷೇತ್ರವೂ ಗಮನ ಸೆಳೆಯುತ್ತಿದೆ. ಈಗಾಗಲೇ ಧಾರವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪ್ರಹ್ಲಾದ್ ಜೋಶಿ ಹಾಗೂ ಕಾಂಗ್ರೆಸ್ ನಿಂದ ವಿನೋದ್ ಅಸೂಟಿ ಅಭ್ಯರ್ಥಿಯಾಗಿದ್ದಾರೆ. ಇದೀಗ ವೀರಶೈವ ಲಿಂಗಾಯತ ಸಮುದಾಯದಿಂದ ಶಿರಹಟ್ಟಿ ಮಠದ ಪೀಠಾಧುಪತಿ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ನಿಲ್ಲುವಂತೆ ಒತ್ತಾಯ ಹಾಕಿದ್ದಾರೆ.

 

ದಿಂಗಾಲೇಶ್ವರ ಸ್ವಾಮೀಜಿ ಅವರು ಗದಗ ಜಿಲ್ಲೆಯ ಶಿರಹಟ್ಟಿಯವರು. ಈಗ ಭಕ್ತರೆಲ್ಲ ಸೇರಿಕೊಂಡು ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸುವಂತೆ ಬಲವಂತ ಮಾಡುತ್ತಿದ್ದಾರೆ. ಯಾಕಂದ್ರೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಐದು ಲಕ್ಷಕ್ಕೂ ಹೆಚ್ಚು ಲಿಂಗಾಯತ ಮತಗಳಿವೆ. ಇದೇ ಕಾರಣಕ್ಕೆ ಸ್ವಾಮೀಜಿ ಅವರಿಗೆ ಸ್ಪರ್ಧೆ ಮಾಡುವಂತೆ ಲಿಂಗಾಯತ ಸಮುದಾಯದವರು ಮತ್ತು ಭಕ್ತರು ಒತ್ತಾಯಿಸಿದ್ದಾರೆ. ಸ್ವಾಮೀಜಿ ಅವರು ಹುಬ್ಬಳ್ಳಿ ಕ್ಷೇತ್ರದಲ್ಲಿ ದೊಡ್ಡ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ ಜನರ ಬಳಿ ಬಾಂಧವ್ಯ ಹೊಂದಿದ್ದಾರೆ.

ಇನ್ನು ಪ್ರಹ್ಲಾದ್ ಜೋಶಿ ಅವರು ಧಾರವಾಡ ಲೋಕಸಭಾ ಕ್ಷೇತ್ರದಿಂದ ಐದನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈಗಾಗಲೇ ನಾಲ್ಕು ಬಾರಿ ಗೆದ್ದಿರುವ ಜೋಶಿ ಅವರಿಗೇನೆ ಐದನೇ ಬಾರಿಯೂ ಬಿಜೆಪಿ ಮಣೆ ಹಾಕಿದೆ. ಅದರಲ್ಲೂ ಬ್ರಾಹ್ಮಣ ಸಮುದಾಯಕ್ಕೆ ಸೇರಿರುವ ಜೋಶಿ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ಕಾಂಗ್ರೆಸ್ ಪಕ್ಷ ಕೂಡ ಅಳೆದು ತೂಗಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ. ಒಬಿಸಿ ಕೋಟಾಗೆ ನೀಡಬೇಕೆಂಬ ಬೇಡಿಕೆ ಮೇರೆಗೆ ವಿನೋದ್ ಅಸೂಟಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಇದರ ನಡುವೆ ಇದೀಗ ದಿಂಗಾಲೇಶ್ವರ ಸ್ವಾಮೀಜಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಾಯ ಕೇಳಿ ಬಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!