ಎಲ್ಲಾ ಪಕ್ಷದಲ್ಲೂ ನನಗೆ ಸ್ನೇಹಿತರಿದ್ದಾರೆ..ಆದ್ರೆ ನಾನು : ಡಿಕೆಶಿ, ಸಿದ್ದರಾಮಯ್ಯ ಭೇಟಿ ಬಳಿಕ ಪ್ರೇಮ್ ಹೇಳಿದ್ದೇನು..?

ಬೆಂಗಳೂರು: ಈಶ್ವರಪ್ಪ ಅವರ ಹೇಳಿಕೆಯನ್ನ ಖಂಡಿಸಿ ಕಾಂಗ್ರೆಸ್ ವಿಧಾಸೌಧದಲ್ಲೇ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಈ ಮಧ್ಯೆ ನಿರ್ದೇಶಕ ಪ್ರೇಮ್ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿದ್ದಾರೆ. ಭೇಟಿ ಬಳಿಕ ಹಲವರಿಗೆ ಹಲವು ಪ್ರಶ್ನೆಗಳು ಹುಟ್ಟಿವೆ.

ಸದ್ಯ ಪ್ರೇಮ್ ತಮ್ಮ ನಿರ್ದೇಶನದ ಏಕ್ ಲವ್ ಯಾ ಸಿನಿಮಾ ಪ್ರಮೋಷನ್ ತಯಾರಿಯಲ್ಲಿದ್ದಾರೆ. ಹೀಗಾಗಿ ಓಡಾಟ ನಡೆಸುತ್ತಿದ್ದಾರೆ. ಇದೇ ವಿಚಾರವಾಗಿ ಪ್ರೇಮ್ ರಾಜಕೀಯ ನಾಯಕರನ್ನು ಭೇಟಿ ಮಾಡಿದ್ದಾರೆ. ಸಿನಿಮಾ ನೋಡುವಂತೆ ಮನವಿ ಮಾಡಿದ್ದಾರೆ.

ಇದೇ ವೇಳೆ ಮಾತನಾಡಿದ ನಿರ್ದೇಶಕ ಪ್ರೇಮ್, ನನಗೆ ರಾಜಕೀಯಕ್ಕೆ ಬರೋದಕ್ಕೆ ಆಸಕ್ತಿಯಿಲ್ಲ. ಆದ್ರೆ ಹೊರಗೆ ನಿಂತು ಸಪೋರ್ಟ್ ಮಾಡ್ತೀನಿ. ಎಲ್ಲಾ ರಾಜಕೀಯ ಪಕ್ಷದಲ್ಲೂ ನನಗೆ ಸ್ನೇಹಿತರು, ಹಿತೈಶಿಗಳಿದ್ದಾರೆ. ರಾಜಕೀಯಕ್ಕೆ ಸೇರದೆ ಇದ್ರು. ಕೆಲಸ ಮಾಡ್ತೇನೆ. ಸದ್ಯ ರಕ್ಷಿತಾ ಬಿಜೆಪಿಯಲ್ಲಿದ್ದಾರೆ. ಎಲೆಕ್ಷನ್ ಗೆ ನಿಲ್ಲುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ ಎಂದಿದ್ದಾರೆ. ಇದೇ ವೇಳೆ ಮಂಡ್ಯ ಚುನಾವಣೆ ಬಗ್ಗೆ ಮಾತಾಡಿದ್ದು, ಅಂಬಿ ಅಣ್ಣ ಇದ್ದಾಗಲೇ ಅವರ ಎದುರು ನಿಲ್ಲಲು ಹೇಳಿದ್ರು. ಆದ್ರೆ ನಾನು ಆಗಲೂ ನಿಲ್ಲಲಿಲ್ಲ ಎಂದಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

55 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago