Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಅದ್ದೂರಿಯಾಗಿ ನೆರವೇರಿತು ನಿರ್ದೇಶಕ ತರುಣ್- ನಟಿ ಸೋನಲ್ ಮದುವೆ

---Advertisement---

 

ಬೆಂಗಳೂರು : ಕಳೆದ ಒಂದು ವರ್ಷದಿಂದ ಪ್ರೀತಿಸಿತ್ತಿದ್ದ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮೆಂಥೋರೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುಹಿರಿಯರ ಆಶೀರ್ವಾದದೊಂದಿದೆ ತರುಣ್ ಮತ್ತು ಸೋನಲ್ ಸತಿ ಪತಿಗಳಾಗಿದ್ದಾರೆ. ಬೆಂಗಳೂರಿನಲ್ಲಿಯೇ ಸಾಂಪ್ರದಾಯಿಕವಾಗಿ ಮದುವೆ ನೆರವೇರಿದೆ.

ಇಬ್ಬರ ಮದುವೆಗೂ ಸ್ಯಾಂಡಲ್ ವುಡ್ ತಾರೆಯರು, ರಾಜಕಾರಣಿಗಳು ಬಂದು ಆಶೀರ್ವದಿಸಿದ್ದಾರೆ. ಇಂದು ತರುಣ್ ಸುಧೀರ್ ತಾಯಿ ಮಾಲತಿ ಸುಧೀಂದ್ರ ಅವರ ಕನಸು ನನಸಾದ ದಿನವಾಗಿದೆ. ಮಗನ ಮದುವೆಯನ್ನು ನೋಡಬೇಕೆಂಬ ಆಸೆ ಅವರದ್ದಾಗಿತ್ತು. ದೊಡ್ಡ ಮಗ ನಂದಕಿಶೋರ್ ಅವರಿಗೆ ಈಗಾಗಲೇ ಮದುವೆಯಾಗಿ ಮಗು ಕೂಡ ಇದೆ. ಆದರೆ ತರುಣ್ ಸುಧೀರ್ ಅವರಿಗೆ ಮದುವೆ ಫಿಕ್ಸ್ ಆಗುತ್ತಿಲ್ಲ ಎಂಬ ಕೊರಗು ಅವರಲ್ಲಿತ್ತು. ತರುಣ್ ಅವರನ್ನು ನೋಡಿಕೊಳ್ಳುವುದಕ್ಕೆ ಯಾರಾದರೂ ಬೇಕಿತ್ತು. ಈಗ ಆ ನೋವು ಕಡಿಮೆಯಾಗಿದೆ. ತಾನಂದುಕೊಂಡಂತೆ ಮಗನ ಮದುವೆಯನ್ನು ಅದ್ದೂರಿಯಾಗಿಯೇ ಮಾಡಿದ್ದಾರೆ.

ಸೋನಲ್ ಅವರನ್ನು ಗ್ರ್ಯಾಂಡ್ ಆಗಿ ಬರ ಮಾಡಿಕೊಂಡರು. ಯುವತಿಯರು ಡ್ಯಾನ್ಸ್ ಮಾಡುವ ಮೂಲಕ ಸೋನಲ್ ಅವರನ್ನು ಕರೆದುಕೊಂಡು ಬಂದಿದ್ದಾರೆ. ಹಿಂದೂ ಸಂಪ್ರದಾಯದಂತೆ ಇಬ್ಬರು ಮದುವೆಯಾಗಿದ್ದಾರೆ. ತರುಣ್ ಸುಧೀರ್ ತಾಳಿ ಕಟ್ಟುತ್ತಿದ್ದಂತೆ ಸೋನಲ್ ಭಾವುಕರಾಗಿದ್ದಾರೆ. ಕಣ್ಣಲ್ಲಿ ನೀರಿ ಬಂದಿದೆ. ಬಳಿಕ ತನ್ನ ತರುಣ್ ಸುಧೀರ್ ತನ್ನ ಪ್ರೀತಿಯ ಮಡದಿಯ ಹಣೆಗೆ ಮುತ್ತಿಟ್ಟಿದ್ದಾರೆ. ಇಂಡಸ್ಟ್ರಿಯ ಕಲಾವಿದರು, ಸ್ನೇಹಿತರೆಲ್ಲ ಸೇರಿ ತರಿಣ್ ಸುಧೀರ್ ಮದುವೆ ಆಗಮಿಸಿ, ನವ ವಧು ವರರಿಗೆ ಆಶೀರ್ವದಿಸಿದ್ದಾರೆ. ಅರಿಶಿನ ಶಾಸ್ತ್ರ, ಮೆಹಂದಿ ಶಾಸ್ತ್ರದಿಂದಾನೂ ಸ್ನೇಹಿತರು ಜೊತೆಗೆ ನಿಂತಿದ್ದಾರೆ. ಇಂದು ಹಿಂದೂ ಸಂಪ್ರದಾಯದಂತೆ ಮದುವೆ ನಡೆದಿದ್ದು, ಮಂಗಳೂರಿನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ನಡೆಯಲಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...