Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅದ್ದೂರಿಯಾಗಿ ನೆರವೇರಿತು ನಿರ್ದೇಶಕ ತರುಣ್- ನಟಿ ಸೋನಲ್ ಮದುವೆ

Facebook
Twitter
Telegram
WhatsApp

 

ಬೆಂಗಳೂರು : ಕಳೆದ ಒಂದು ವರ್ಷದಿಂದ ಪ್ರೀತಿಸಿತ್ತಿದ್ದ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮೆಂಥೋರೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುಹಿರಿಯರ ಆಶೀರ್ವಾದದೊಂದಿದೆ ತರುಣ್ ಮತ್ತು ಸೋನಲ್ ಸತಿ ಪತಿಗಳಾಗಿದ್ದಾರೆ. ಬೆಂಗಳೂರಿನಲ್ಲಿಯೇ ಸಾಂಪ್ರದಾಯಿಕವಾಗಿ ಮದುವೆ ನೆರವೇರಿದೆ.

ಇಬ್ಬರ ಮದುವೆಗೂ ಸ್ಯಾಂಡಲ್ ವುಡ್ ತಾರೆಯರು, ರಾಜಕಾರಣಿಗಳು ಬಂದು ಆಶೀರ್ವದಿಸಿದ್ದಾರೆ. ಇಂದು ತರುಣ್ ಸುಧೀರ್ ತಾಯಿ ಮಾಲತಿ ಸುಧೀಂದ್ರ ಅವರ ಕನಸು ನನಸಾದ ದಿನವಾಗಿದೆ. ಮಗನ ಮದುವೆಯನ್ನು ನೋಡಬೇಕೆಂಬ ಆಸೆ ಅವರದ್ದಾಗಿತ್ತು. ದೊಡ್ಡ ಮಗ ನಂದಕಿಶೋರ್ ಅವರಿಗೆ ಈಗಾಗಲೇ ಮದುವೆಯಾಗಿ ಮಗು ಕೂಡ ಇದೆ. ಆದರೆ ತರುಣ್ ಸುಧೀರ್ ಅವರಿಗೆ ಮದುವೆ ಫಿಕ್ಸ್ ಆಗುತ್ತಿಲ್ಲ ಎಂಬ ಕೊರಗು ಅವರಲ್ಲಿತ್ತು. ತರುಣ್ ಅವರನ್ನು ನೋಡಿಕೊಳ್ಳುವುದಕ್ಕೆ ಯಾರಾದರೂ ಬೇಕಿತ್ತು. ಈಗ ಆ ನೋವು ಕಡಿಮೆಯಾಗಿದೆ. ತಾನಂದುಕೊಂಡಂತೆ ಮಗನ ಮದುವೆಯನ್ನು ಅದ್ದೂರಿಯಾಗಿಯೇ ಮಾಡಿದ್ದಾರೆ.

ಸೋನಲ್ ಅವರನ್ನು ಗ್ರ್ಯಾಂಡ್ ಆಗಿ ಬರ ಮಾಡಿಕೊಂಡರು. ಯುವತಿಯರು ಡ್ಯಾನ್ಸ್ ಮಾಡುವ ಮೂಲಕ ಸೋನಲ್ ಅವರನ್ನು ಕರೆದುಕೊಂಡು ಬಂದಿದ್ದಾರೆ. ಹಿಂದೂ ಸಂಪ್ರದಾಯದಂತೆ ಇಬ್ಬರು ಮದುವೆಯಾಗಿದ್ದಾರೆ. ತರುಣ್ ಸುಧೀರ್ ತಾಳಿ ಕಟ್ಟುತ್ತಿದ್ದಂತೆ ಸೋನಲ್ ಭಾವುಕರಾಗಿದ್ದಾರೆ. ಕಣ್ಣಲ್ಲಿ ನೀರಿ ಬಂದಿದೆ. ಬಳಿಕ ತನ್ನ ತರುಣ್ ಸುಧೀರ್ ತನ್ನ ಪ್ರೀತಿಯ ಮಡದಿಯ ಹಣೆಗೆ ಮುತ್ತಿಟ್ಟಿದ್ದಾರೆ. ಇಂಡಸ್ಟ್ರಿಯ ಕಲಾವಿದರು, ಸ್ನೇಹಿತರೆಲ್ಲ ಸೇರಿ ತರಿಣ್ ಸುಧೀರ್ ಮದುವೆ ಆಗಮಿಸಿ, ನವ ವಧು ವರರಿಗೆ ಆಶೀರ್ವದಿಸಿದ್ದಾರೆ. ಅರಿಶಿನ ಶಾಸ್ತ್ರ, ಮೆಹಂದಿ ಶಾಸ್ತ್ರದಿಂದಾನೂ ಸ್ನೇಹಿತರು ಜೊತೆಗೆ ನಿಂತಿದ್ದಾರೆ. ಇಂದು ಹಿಂದೂ ಸಂಪ್ರದಾಯದಂತೆ ಮದುವೆ ನಡೆದಿದ್ದು, ಮಂಗಳೂರಿನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ನಡೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

ಶಾಸಕ ಮುನಿರತ್ನ ವಿರುದ್ಧ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ : ಎಸ್.ಜಯಣ್ಣ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಗುತ್ತಿಗೆದಾರನನ್ನು ಮನೆಗೆ ಕರೆಸಿಕೊಂಡು ಲಂಚಕ್ಕೆ ಬೇಡಿಕೆಯಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬೆಂಗಳೂರು ರಾಜರಾಜೇಶ್ವರಿ

error: Content is protected !!