Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದರ್ಶನ್ ಗೆ ಮತ್ತೆ ನಿರಾಸೆ : ಜಾಮೀನು ಅರ್ಜಿ ಅ.4ಕ್ಕೆ ಮುಂದೂಡಿಕೆ..!

---Advertisement---

ಬೆಂಗಳೂರು: ನಟ ದರ್ಶನ್ ಕೊಲೆ ಆರೋಪದ ಮೇಲೆ ಬಳ್ಳಾರಿ ಜೈಲಿನಲ್ಲಿದ್ದು, ಹೊರಗೆ ಬರಲು ಹರಸಾಹಸ ಮಾಡುತ್ತಿದ್ದಾರೆ. ಈಗಾಗಲೇ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದು, ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ದರ್ಶನ್ ಅವರಿಗೆ ಇಂದು ಕೂಡ ನಿರೀಕ್ಷೆ ಹುಸಿಯಾಗಿದೆ. ಜಾಮೀನು ಅಕ್ಟೋಬರ್ 4 ಕ್ಕೆ ಮುಂದೂಡಿಕೆಯಾಗಿದೆ. ಹೀಗಾಗಿ ದರ್ಶನ್ ಅವರಿಗೆ ಮತ್ತೆ ನಿರಾಸೆಯಾಗಿದೆ.

ವಾದ ಮಂಡಿಸಲು ಕಾಲಾವಕಾಶ ಬೇಕೆಂದು ದರ್ಶನ್ ಪರ ವಕೀಲರು ಮನವಿ ಮಾಡಿದ್ದಾರೆ. ಹೀಗಾಗಿ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದಕ್ಕೆ ಹಾಕಿದೆ. ಕಳೆದ ವಿಚಾರಣೆಯ ಸಂದರ್ಭದಲ್ಲೂ ಕೂಡ ದರ್ಶನ್ ಪರ ವಕೀಲರು ವಾದ ಮಂಡಿಸಲು ಸಮಾಯವಕಾಶ ಕೇಳೊದ್ದರು. ಆಗ ಸರ್ಕಾರಿ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. ದರ್ಶನದ ಜೈಲು ಸೇರಿ ಈಗಾಗಲೇ ನೂರು ದಿನಗಳ ಮೇಲಾಗಿದೆ. ಜಾಮೀನು ಸಿಕ್ಕರೆ ಸಾಕಪ್ಪ ಎಂಬ ಮನೋಭಾವದಲ್ಲಿದ್ದಾರೆ ದರ್ಶನ್.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾದ ಮೇಲೆ ದರ್ಶನ್ ಪರ ವಕೀಲರು ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡಿದರು. ಕೇಸ್ ಗೆ ಸಂಬಂಧಿಸಿದಂತೆ ಒಂದಷ್ಟು ಮಾಹಿತಿ ಪಡೆಯುವುದಕ್ಕೆ ಬಳ್ಳಾರಿ ಜೈಲಿಗೆ ಹೋಗಿ ಬಂದಂತ ವಕೀಲರು, ಆ ಬಳಿಕ ವಾದ ಮಂಡಿಸಲು ಕೋರ್ಟ್ ನಲ್ಲಿ ಕಾಲಾವಕಾಶ ಪಡೆಯುತ್ತಿದ್ದಾರೆ. ಇತ್ತಿಚೆಗಷ್ಟೇ ದರ್ಶನ್ ಪರ ವಕೀಲರು, ಸೆಷನ್ ನ್ಯಾಯಾಲಯದಲ್ಲಿಯೇ ದರ್ಶನ್ ಅವರಿಗೆ ಜಾಮೀನು ಸಿಗಲಿದೆ. ಒಂದು ವೇಳೆ ಅಲ್ಲಿ ಸಿಗದೇ ಹೋದರೆ ಹೈಕೋರ್ಟ್ ಗೆ ಹೋಗ್ತೀವಿ ಅಂತ ಹೇಳಿದ್ದರು. ಇದೀಗ ವಾದ ಮಂಡಿಸಲು ಸಮಯ ತೆಗೆದುಕೊಳ್ಳುತ್ತಿದ್ದು, ಒಂದಷ್ಟು ಕುತೂಹಲ ಉಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...