ನವದೆಹಲಿ: ಆರಂಭದಲ್ಲಿ ಕೈಕೊಟ್ಟಿದ್ದ ಮುಂಗಾರು ದಿಢೀರನೇ ಎಲ್ಲಾ ಕಡೆ ಜೋರಾಗಿದೆ. ಕರ್ನಾಟಕ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಇದೆ. ಸಾಕಷ್ಟು ಅನಾಹುತ ಕೂಡ ಸಂಭವಿಸಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದಿಢೀರನೇ ಸಭೆ ಕರೆದಿದ್ದಾರೆ.
ಕೇಂದ್ರದ ಹಿರಿಯ ಅಧಿಕಾರಿಗಳು, ಸಚಿವರೊಂದಿಗೆ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಜೊತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಭಾರೀ ಮಳೆಯಿಂದ ಗುಡ್ಡಗಾಡು ರಾಜ್ಯದ ವಿವಿಧ ಭಾಗಗಳಲ್ಲಿರುವ ಜನರನ್ನು ರಕ್ಷಿಸುವಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ.
ಮಳೆಯಿಂದಾಗಿ ಈಗಾಗಲೆ ಕೆಲವರು ಸಾವನ್ನಪ್ಪಿದ್ದಾರೆ. ಹೀಗಾಗಿ ಸ್ಥಳೀಯ ಆಡಳಿತಗಳಯ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ಪಡೆಗಳಿಗೆ ಅಲರ್ಟ್ ಆಗಿರಲು ತಿಳಿಸಿದ್ದು, ಅನಾಹುತವಾಗದಂತೆ ನೋಡಿಕೊಳ್ಳಬೇಕು ಎಂದು ಸಭೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











