Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಯೋಗಿಯಂತೆ ಚುಂಚಶ್ರೀಗಳೂ ಸಿಎಂ ಆಗಲೆಂದು ಚರ್ಚೆ : ಶ್ರೀಗಳ ಉತ್ತರವೇನು ?

---Advertisement---

ಆದಿಚುಂಚನಗಿರಿ ಮಠ ರಾಷ್ಟ್ರ ಹಾಗೂ ರಾಜ್ಯಕ್ಕೆ ನಾಯಕರನ್ನು ರೂಪಿಸುವ ಮಠವೇ ಹೊರತು, ನೇರ ರಾಜಕಾರಣ ಮಾಡುವ ಸಂಸ್ಥೆಯಲ್ಲ ಎಂದು ಪೀಠಾಧ್ಯಕ್ಷ ನಿರ್ಮಲಾನಂದನಾಥ ಶ್ರೀ ಸ್ಪಷ್ಟಪಡಿಸಿದ್ದಾರೆ. ಚನ್ನಪಟ್ಟಣ ತಾಲೂಕಿನ ಗೌಡಗೆರೆ ಗ್ರಾಮದ ಚಾಮುಂಡೇಶ್ವರಿ ಬಸವಪ್ಪನ ಪುಣ್ಯಕ್ಷೇತ್ರದಲ್ಲಿ ನಡೆದ ಜೋಗಿಗಳ ಸಮಾವೇಶ ಹಾಗೂ ಸತ್ಸಂಗ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಮ್ಮದು ಶುದ್ಧ ಆಧ್ಯಾತ್ಮಿಕ ಮಠ. ರಾಜಕಾರಣದ ಸೊಕ್ಕು ಕೂಡ ಇಲ್ಲ” ಎಂದು ಹೇಳಿದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಉದಾಹರಣೆ ನೀಡಿದ ಸ್ವಾಮೀಜಿ, “ಯೋಗಿ ಆದಿತ್ಯನಾಥ್ ಅವರು ಸಿಎಂ ಆಗುವ ಮೊದಲು ಅವರ ಕುಟುಂಬ ರಾಜಕಾರಣದಲ್ಲಿ ಇತ್ತು. ಆದರೆ ಆದಿಚುಂಚನಗಿರಿ ಮಠ ಯಾವತ್ತಾದರೂ ರಾಜಕೀಯ ಪ್ರವೇಶ ಮಾಡಿದ್ದನ್ನು ನೋಡಿದ್ದೀರಾ?” ಎಂದು ಪ್ರಶ್ನಿಸಿದರು.

“ನಾಥ ಪರಂಪರೆಯ ಯೋಗಿ ಆದಿತ್ಯನಾಥ್ ಸಿಎಂ ಆದ ನಂತರ, ಇಲ್ಲಿ ಚುಂಚನಗಿರಿ ಶ್ರೀಗಳೂ ಸಿಎಂ ಆಗಬೇಕು ಎಂಬ ಚರ್ಚೆ ಆರಂಭವಾಗಿತ್ತು. ಆದರೆ ನಮ್ಮ ಪೀಠ ಧಾರ್ಮಿಕ ಪರಂಪರೆಯ ಮಾರ್ಗದಲ್ಲೇ ಸಾಗಿದ್ದು, ಮುಂದೆಯೂ ಅದೇ ಹಾದಿಯಲ್ಲಿ ಸಾಗಲಿದೆ” ಎಂದು ಅವರು ಸ್ಪಷ್ಟಪಡಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...