Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ; ಹೇಳಿದ್ದೇನು ಡಿಕೆ ಶಿವಕುಮಾರ್..?

ಡಿಕೆ ಶಿವಕುಮಾರ್
---Advertisement---

 

ಬೆಂಗಳೂರು; ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಹುದ್ದೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಹುದ್ದೆ ಬದಲಾವಣೆಯ ಚರ್ಚೆ ನಡೆಯುತ್ತಲೆ ಇದೆ. ಸಿಎಂ ಆಕಾಂಕ್ಷಿಯಾಗಿರುವ ಡಿಕೆ ಶಿವಕುಮಾರ್, ಕೆಪಿಸಿಸಿ ಹುದ್ದೆಯನ್ನು ಅಷ್ಟು ಸುಲಭವಾಗಿ ಬಿಟ್ಟು ಕೊಡೋದಿಲ್ಲ ಎಂಬ ಮಾತುಗಳು ಇದಾವೆ. ಇದರ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಸಾಕಷ್ಟು ಆಕಾಂಕ್ಷಿಗಳಿದ್ದು, ಇದೀಗ ಹೈಕಮಾಂಡ್ ಜೊತೆಗೆ ನಡೆದ ಚರ್ಚೆಯ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸೇರಿದಂತೆ ಇತರೆ ಚರ್ಚೆಗಳಾಗಿವೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಆದರೆ ಯಾವುದೇ ಬದಲಾವಣೆ ಇಲ್ಲ. ಒಂದಷ್ಟು ಪದಾಧಿಕಾರಿಗಳನ್ನು ನೇಮಕ ಮಾಡುತ್ತಾರೆ‌. ಒಂದಷ್ಟು ಜಿಲ್ಲಾ ಅಧ್ಯಕ್ಷರನ್ನು ಬದಲಾವಣೆ ಮಾಡುತ್ತಾರೆ. ಇದು ಹೊರತಾಗಿ ಯಾರೂ ಸಹ ಯಾವುದೇ ವಿಷಯವನ್ನು ನನ್ನ ಬಳಿ ಚರ್ಚೆ ಮಾಡಿಲ್ಲ ಎಂದು ಹೇಳುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಇದೇ ವೇಳೆ ಬಿಜೆಪಿಯವರ ಜನಾಕ್ರೋಶ ಯಾತ್ರೆಯ ಬಗ್ಗೆಯೂ ಮಾತನಾಡಿ, ಬಿಜೆಒಇಯವರು ಯಾತ್ರೆ ಹೊರಟ ದಿನವೇ ಕೇಂದ್ರ ಸರ್ಕಾರದವರು ಪೆಟ್ರೋಲ್, ಡಿಸೇಲ್ ಗೆ ತಲಾ 2 ರೂಪಾಯಿ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆಯನ್ನು 50 ರೂಪಾಯಿ ಜಾಸ್ತಿ ಮಾಡಿ ಉಡ್ಘಾಟನೆ ಮಾಡಿ, ಇವರ ಯಾತ್ರೆಗೆ ಗಿಫ್ಟ್ ಕಳುಹಿಸಿದ್ದಾರೆ. ಇದರ ಬಗ್ಗೆ ಜನಸಾಮಾನ್ಯರು ಮಾಡುತ್ತಿರುವ ಗುಣಗಾನವನ್ನು ಎಲ್ಲರು ಕೇಳಬೇಕು. ಕೇಂದ್ರ ಸರ್ಕಾರದ ವಿರುದ್ಧ ಮಾಡುತ್ತಿರುವ ಜನಾಕ್ರೋಶ ಯಾತ್ರೆ ಎಂದು ಬಿಜೆಪಿಯವರು ಬೋರ್ಡ್ ಹಾಕಿಕೊಳ್ಳಬೇಕು. ಬುಧವಾರದಿಂದ ಕಚ್ಛಾ ತೈಲದ ಬೆಲೆ ಶೇಜಡ 4.23 ರಷ್ಟು ಇಳಿಕೆಯಾಗಿದೆ. ಆದರೂ ಕೇಂದ್ರ ಸರ್ಕಾರ ಬೆಲೆ ಇಳಿಕೆ ಮಾಡಿಲ್ಲ. ಪೆಟ್ರೋಲ್ ನ ಮೂಲ ದರ ಪ್ರತಿ ಲೀಟರ್ ಗೆ 42.60 ಪೈಸೆ ಇದೆ ಎಂದು ಮಾಹಿತಿ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...