Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಜ್ಞಾನ  ಬಳಸಿಕೊಂಡು ಮೌಢ್ಯಗಳನ್ನು ಓಡಿಸಿ : ಹೆಚ್.ಎಸ್.ಟಿ. ಸ್ವಾಮಿ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ

ವೇದಮೂರ್ತಿ, ಭೀಮಸಮುದ್ರ,
ಮೊ :  9880836505

ಸುದ್ದಿಒನ್, ಚಿತ್ರದುರ್ಗ, (ಜು.15) :  ಮಕ್ಕಳಿಗೆ ವಿಜ್ಞಾನವೇ ಜಗತ್ತು. ವಿಜ್ಞಾನವಿಲ್ಲವೆಂದರೆ ಜಗತ್ತಿಲ್ಲ. ವಿಜ್ಞಾನ  ಬಳಸಿಕೊಂಡು ಮೌಢ್ಯಗಳನ್ನು ಓಡಿಸಿ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ನ ಕಾರ್ಯಕಾರಿ ಸದಸ್ಯರಾದ ಹೆಚ್.ಎಸ್.ಟಿ. ಸ್ವಾಮಿ ಮಕ್ಕಳಿಗೆ ಕರೆ ನೀಡಿದರು.

ತಾಲ್ಲೂಕಿನ ಭೀಮಸಮುದ್ರದ ಶ್ರೀ ಭೀಮೇಶ್ವರ ಗ್ರಾಮಾಂತರ ಶಾಲೆಯಲ್ಲಿ ಕಿರುವಿಜ್ಞಾನ ಕೇಂದ್ರ ಹಾಗೂ ಕಂಪ್ಯೂಟರ್  ಕೊಠಡಿ ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಭೀಮೇಶ್ವರ ಶಾಲೆಯ ಅಧ್ಯಕ್ಷರಾದ ಬಿ.ಟಿ. ಪುಟ್ಟಪ್ಪ ಮಾತನಾಡಿ ಶಾಲಾ ಮಕ್ಕಳು ಉತ್ತಮವಾಗಿ ಓದಿ ಭವಿಷ್ಯ ರೂಪಿಸಿಕೊಳ್ಳಬೇಕು. ತಂದೆ ತಾಯಿ ಕಷ್ಟ ಪಟ್ಟು ನಿಮ್ಮನ್ನು ಓದಿಸುತ್ತಾರೆ. ಶಾಲೆಗೆ ಹಾಗೂ ತಂದೆ ತಾಯಿಗಳಿಗೆ ಒಳ್ಳೆಯ ಹೆಸರು ತರಬೇಕೆಂದು ಮಕ್ಕಳಿಗೆ ತಿಳಿಸಿದರು. ಇದೇ ಸಂದರ್ಭದಲ್ಲಿ 8ನೇ ತರಗತಿ ಉಚಿತ ಸಮವಸ್ತ್ರ ವಿತರಣೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಬಿಕೆ ಕಲ್ಲಪ್ಪ,  ಸ್ಟೇಮ್ ಲರ್ನಿಂಗ್ ಸಂಸ್ಥೆಯ ಮಹೇಶ, ವೇದಾಂತ ಲಿಮಿಟೆಡ್‌ನ ರವಿ ಬಿಸಿಗುಪ್ಪ, ಹಾಗೂ ಭಾಗ್ಯಜ್ಯೋತಿ ಅವರು ಭಾಗವಹಿಸಿದ್ದರು.

ಇದೆ ಶಾಲೆಯಲ್ಲಿ ಸುಮಾರು ಐದು ವರ್ಷಗಳ ಕಾಲ ಮುಖ್ಯೋಪಾಧ್ಯರಾಗಿ ಕಾರ್ಯನಿರ್ವಹಿಸಿ ಮಂಜುನಾಥಾಚಾರಿ ಎಸ್. ಹಾಗೂ ಮುಖ್ಯೋಪಾಧ್ಯಯ ಪ್ರಕಾಶ್, ಸ್ಥಲಹಾ ಸಮಿತಿಯ ಸದಸ್ಯರಾದ ದೇವಕುಮಾರ್ ಹಾಗೂ ಶಾಲೆಯ ಎಲ್ಲ ನೌಕರವರ್ಗದವರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ : ಎಸ್ಐಟಿ ಮುಂದೆ ಹಾಜರಾಗುವುದು ಉತ್ತಮ ಎಂದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಇನ್ನು ಪತ್ತೆಯಾಗಿಲ್ಲ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿಗೆ ಪ್ರಶ್ನೆ ಎದುರಾದಾಗ, ಆರೋಪಿ ಆಗಿದ್ದವನು ಆರೋಪವನ್ನು ಎದುರಿಸಬೇಕು. ಕಾನೂನು ಹೋರಾಟವನ್ನು ಮಾಡಬೇಕು ಎಂದಿದ್ದಾರೆ.   ಆರೋಪವೆಂಬುದು

ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ ಕೋರಿದ ಎಸ್ ಆರ್ ಎಸ್ ಹೆರಿಟೇಜ್ ಶಾಲೆ

  ಸುದ್ದಿಒನ್, ಚಿತ್ರದುರ್ಗ, ಮೇ. 20 : ಎಸ್ ಆರ್ ಎಸ್ ಹೆರಿಟೇಜ್ ಶಾಲೆಯು 2024-25 ರ ಶೈಕ್ಷಣಿಕ ವರ್ಷ ಸೋಮವಾರದಿಂದ ಆರಂಭಗೊಂಡಿದ್ದು ಬೇಸಿಗೆ ರಜಾ ಮುಗಿಸಿಕೊಂಡು ಶಾಲೆಯತ್ತ ಮುಖ ಮಾಡಿದ ವಿದ್ಯಾರ್ಥಿಗಳನ್ನು ಶಾಲಾ

ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಮೇ 20: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ

error: Content is protected !!