Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೀನೇಶ್ ಪೋಗಟ್ ಅನರ್ಹತೆ : ಭಾರತದ ಮುಂದಿನ ನಡೆ ಏನು..? ಪಿ.ಟಿ.ಉಷಾ ಜೊತೆಗೆ ಪ್ರಧಾನಿ ಚರ್ಚಿಸಿದ್ದೇನು..?

Facebook
Twitter
Telegram
WhatsApp

ಪ್ಯಾರೀಸ್ ನಡೆಯುತ್ತಿರುವ ಒಲಂಪಿಕ್ಸ್ ನ ಕುಸ್ತಿ ಪಂದ್ಯದಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ವೀನೇಶ್ ಪೋಗಟ್ ಅನರ್ಹಗೊಂಡಿದ್ದಾರೆ. ಘಟಾನುಘಟಿಗಳನ್ನೇ ನೆಲಕ್ಕೆ ಕೆಡವಿ ಭೇಷ್ ಎನ್ನಿಸಿಕೊಂಡವರು ವಿನೇಶ್. ಒಂದೇ ಒಂದು ಪಂದ್ಯವನ್ನು ಸೋಲದ ಟೋಕಿಯೋ ಚಾಂಪಿಯನ್ ನನ್ನೇ ವಿನೇಶ್ ನಿನ್ನೆ ಸೋಲಿಸಿದ್ದರು. ಆದರೆ ನೂರು ಗ್ರಾಂ ತೂಕ ಹೆಚ್ಚಾಗಿದ್ದಕ್ಕೆ ಅನರ್ಹಗೊಂಡರು. ಚಿನ್ನದ ಪದಕ ಗೆದ್ದು ಬರುವುದು ಗ್ಯಾರಂಟಿ ಎಂದೇ ಸಂಭ್ರಮಪಟ್ಟ ಭಾರತೀಯರಿಗೆ ಇದು ಅರಗಿಸಿಕೊಳ್ಳಲಾಗದ ತುತ್ತಾಗಿತ್ತು. ಇದೀಗ ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರು ಚರ್ಚೆ ನಡೆಸುತ್ತಿದ್ದಾರೆ.

ವಿನೇಶ್ ಪೋಗಟ್ ಆಡಿದ ಆಟಕ್ಕೆ ಎಲ್ಲರೂ ಬೆಚ್ಚಿ ಬಿದ್ದಿದ್ದರು. ಆದರೆ ಫೈನಲ್ ಪ್ರವೇಶಿಸಿದಾಗಲೇ ಇಂಥ ಆಘಾತಕಾರಿ ಸುದ್ದಿ ಎಲ್ಲರಿಗೂ ಬೇಸರ ತರಿಸಿದೆ‌. ಈ ಬಗ್ಗೆ ಗಮನ ಹರಿಸಿದ ಪ್ರಧಾನಿ‌ ಮೋದಿ ಅವರು ಪಿ.ಟಿ ಉಷಾ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಪಿ.ಟಿ.ಉಷಾ ಅವರು ಇಂಡಿಯನ್ ಒಲಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷೆಯಾಗಿದ್ದಾರೆ. ಇರುವ ಮಾರ್ಗಗಳೇನು ಎಂಬುದೆಲ್ಲವನ್ನು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಘಟನೆಯ ಬಗ್ಗೆ ಪಿ.ಟಿ.ಉಷಾ ಅವರಿಂದ ಪ್ರಧಾನಿ ಮೋದಿ ಅವರು ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ವೀನೇಶ್ ಪೋಗಟ್ ಅವರ ಬೆಂಬಲಕ್ಕೆ ನಿಂತಿರುವ ಪ್ರಧಾನಿ ಮೋದಿ ಅವರು, ಏನೆಲ್ಲಾ ಸಾಧ್ಯವೋ ಅದೆಲ್ಲವನ್ನು ಮಾಡುವುದಕ್ಕೆ ಸೂಚನೆ‌ ನೀಡಿದ್ದಾರೆ. ಅಗತ್ಯ ಬಿದ್ದಲ್ಲಿ ಪ್ರಬಲ ಪ್ರತಿಭಟನೆ ನಡೆಸಲು ಸೂಚನೆ‌ ನೀಡಲಾಗಿದೆ.

ಇನ್ನು ಒಲಂಪಿಕ್ಸ್ ನಿಯಮದ ಅನ್ವಯದ ಪ್ರಕಾರ ಅನರ್ಹತೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ಅಂತರಾಷ್ಟ್ರೀಯ ಒಲಂಪಿಕ್ಸ್ ಸಮಿತಿಯಲ್ಲಿ ಅವಕಾಶವಿಲ್ಲ. ಹೀಗಾಗಿ ಭಾರತೀಯ ಒಲಂಪಿಕ್ಸ್ ಅಸೋಸಿಯೇಷನ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದೇ ಎಲ್ಲರ ಯೋಚನೆಯಾಗಿದೆ. ಆದರೆ ಪೋಗಟ್ ಅನರ್ಹತೆ ಮಾತ್ರ ಇಡೀ ದೇಶದ ಜನರಿಗೇನೆ ಶಾಕ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!