Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡಗಳ ನಿರ್ಮಾಣಕ್ಕೆ ಅಡ್ಡಿ : ಮಕ್ಕಳಿಂದ ಪ್ರತಿಭಟನೆ

Facebook
Twitter
Telegram
WhatsApp

ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ,(ಜ.04) : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆರು ಕಟ್ಟಡಗಳ ನಿರ್ಮಾಣಕ್ಕೆ ಸರ್ಕಾರದಿಂದ ಎಪ್ಪತ್ತು ಲಕ್ಷ ರೂ.ಮಂಜೂರಾಗಿದ್ದು, ಕಾಮಗಾರಿ ಆರಂಭಗೊಂಡಿರುವುದರಿಂದ ವ್ಯಕ್ತಿಯೋರ್ವ ಆರು ಗುಂಟೆ ಜಾಗವಿದೆ ಎಂದು ತಗಾದೆ ತೆಗೆದಿರುವುದನ್ನು ವಿರೋಧಿಸಿ ಮುದ್ದಾಪುರದಲ್ಲಿ ಮಂಗಳವಾರ ಪ್ರಾಥಮಿಕ ಶಾಲೆ ಮಕ್ಕಳು ಪ್ರತಿಭಟನೆ ನಡೆಸಿದರು.

1977 ರಲ್ಲಿ ಏಳು ಎಕರೆ ಜಾಗವನ್ನು ಸರ್ಕಾರ ವಶಪಡಿಸಿಕೊಂಡು ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಜನತಾ ಕಾಲೋನಿಯನ್ನು ನಿರ್ಮಿಸಿದೆ.

ಈಗ ಪ್ರಾಥಮಿಕ ಶಾಲೆಯ ಕಟ್ಟಡಗಳನ್ನು ಕೆಡವಿ ಹೊಸದಾಗಿ ಕಟ್ಟಡಗಳ ನಿರ್ಮಾಣಕ್ಕೆ ಸರ್ಕಾರ ಎಪ್ಪತ್ತು ಲಕ್ಷ ರೂ.ಗಳನ್ನು ಮಂಜೂರು ಮಾಡಿ ಸಾರ್ವಜನಿಕರ ಓಡಾಟಕ್ಕೆ ಹದಿನೇಳು ಅಡಿಯಷ್ಟು ದಾರಿ ಬಿಟ್ಟಿದ್ದರು.

ಮುದ್ದಾಪುರದ ವಾಸಿ ಕಲ್ಲೇಶಿ ಎನ್ನುವವರು ಆರು ಗುಂಟೆ ಜಾಗ ನನಗೆ ಸೇರಬೇಕೆಂದು ತಕರಾರು ಮಾಡುತ್ತಿರುವುದರಿಂದ ಮಕ್ಕಳು ಕೊಠಡಿಯಿಲ್ಲದೆ ಮರದ ಕೆಳಗೆ ಕುಳಿತು ಪಾಠ ಕೇಳುತ್ತಿರುವುದನ್ನು ವಿರೋಧಿಸಿ ಮುದ್ದಾಪುರದ ರೈತ ನಾಗರಾಜ್ ಮಂಗಳವಾರ ಮಕ್ಕಳೊಂದಿಗೆ ಪ್ರತಿಭಟನೆ ನಡೆಸಿ ಸರ್ಕಾರ ಇತ್ತ ಗಮನಹರಿಸಬೇಕೆಂದು ಮನವಿ ಮಾಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

error: Content is protected !!