ಸುದ್ದಿಒನ್, ಚಿತ್ರದುರ್ಗ ಮೇ.19 : ವಿಜಯನಗರ ಜಿಲ್ಲೆ ಹೊಸಪೇಟೆ ನಗರದಲ್ಲಿ ನಾಳೆ (ಮೇ.20 ರಂದು) ನಡೆಯಲಿರುವ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆದುಕೊಂಡು ಹೋಗಲು ಚಿತ್ರದುರ್ಗ ವಿಭಾಗದ ವತಿಯಿಂದ ಸುಮಾರು 140 ಮತ್ತು ದಾವಣಗೆರೆ ವಿಭಾಗದ ವತಿಯಿಂದ ಸುಮಾರು 200 ಬಸ್ಸುಗಳನ್ನು ನಿಯೋಜನೆ ಮಾಡಲಾಗಿದೆ.
ಆದ್ದರಿಂದ ನಾಳೆ (ಮೇ. 20) ಸಂಸ್ಥೆಯ ಬಸ್ಸುಗಳ ಸೇವೆ ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿಲ್ಲದ ಕಾರಣ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಸಹಕರಿಸಬೇಕಾಗಿ ಎರಡೂ ಜಿಲ್ಲೆಗಳ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









