Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜಸ್ಥಾನದ ಕಾಂಗ್ರೆಸ್ ಸರಕಾರವನ್ನು ವಿಸರ್ಜಿಸಿ : ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ಆಗ್ರಹ

Facebook
Twitter
Telegram
WhatsApp

ಚಿತ್ರದುರ್ಗ,(ಜು.02) : ನೂಪುರ್ ಶರ್ಮರ ಹೇಳಿಕೆಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ರಾಜಸ್ಥಾನದ ಉದಯಪುರದ ಟೈಲರ್ ಕನ್ಹಯ್ಯಲಾಲ್ ಅವರನ್ನು ಅತ್ಯಂತ ಭಯಾನಕ, ಭೀಭತ್ಸ, ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಕುರಿ, ಕೋಳಿ ಹತ್ಯೆಗಿಂತ ಭೀಕರವಾಗಿ ಹತ್ಯೆ ನಡೆದಿದೆ. ಇದು ಅತ್ಯಂತ ಖಂಡನೀಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ಅವರು ಟೀಕಿಸಿದರು.

ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ  ಅವರು, ವಿಡಿಯೋ ಮಾಡಿ ಹತ್ಯೆ ಮಾಡಲಾಗಿದೆ. ಹಂತಕರನ್ನು ಬಂಧಿಸಲಾಗಿದೆ. ಇದು ಈ ದೇಶದಲ್ಲಿ ಈಚೆಗೆ ನಡೆದ ಅತ್ಯಂತ ಭೀಕರ ಘಟನೆ. ಕನ್ಹಯ್ಯಲಾಲ್ 15 ದಿನ ಮೊದಲೇ ಜೀವ ಬೆದರಿಕೆಯ ಕುರಿತು ಪೊಲೀಸರಿಗೆ ದೂರು ನೀಡಿದ್ದರು. ಆದರೆ, ಅಲ್ಲಿನ ಪೊಲೀಸರು ರಾಜಿ ಮಾಡಿಸಿದ್ದರು. ಆದ್ದರಿಂದ ಈ ದುರ್ಘಟನೆಗೆ ಕಾಂಗ್ರೆಸ್ ಸರಕಾರವೇ ಕಾರಣ ಆದ್ದರಿಂದ ಹತ್ಯೆಗೆ ನೇರ ಕಾರಣವಾದ ರಾಜಸ್ಥಾನದ ಕಾಂಗ್ರೆಸ್ ಸರಕಾರವನ್ನು ಬರ್ಖಾಸ್ತು ಮಾಡಬೇಕೆಂದು ಅವರು ರಾಷ್ಟ್ರಪತಿಗಳು ಮತ್ತು ಕೇಂದ್ರ ಸರಕಾರವನ್ನು ಆಗ್ರಹಿಸಿದರು.

ಕಾಶ್ಮೀರಿ ಪಂಡಿತರನ್ನು ಇದೇ ರೀತಿ ಕುರಿ, ಮೇಕೆಗಳಂತೆ ಹತ್ಯೆ ಮಾಡಿದ್ದರು. ಉಟ್ಟ ಬಟ್ಟೆಯಲ್ಲಿ ಓಡುವಂತೆ ಮಾಡಿದ್ದರು. ಅವತ್ತೇ ಇದನ್ನು ನಿಯಂತ್ರಿಸಿದ್ದರೆ ಈ ರೀತಿ ಅಟ್ಟಹಾಸ, ಅಹಂಕಾರ ಮೆರೆಯಲು ಅವಕಾಶ ಇರುತ್ತಿರಲಿಲ್ಲ. ಪರಿಣಾಮವಾಗಿ ಕರ್ನಾಟಕದಲ್ಲೂ ಹರ್ಷನ ಕೊಲೆ ನಡೆಯಿತು. ಅದೇ ಕತ್ತಿಗಳೇ ಕನ್ಹಯ್ಯ ಲಾಲ್ ಹತ್ಯೆ ಮಾಡಿವೆ ಎಂದು ಆರೋಪಿಸಿ ಯಾವುದೇ ಸಮಸ್ಯೆಗಳನ್ನು ಕಾನೂನು ಮಾತುಕಥೆ ಹೋರಾಟದ ಮೂಲಕ ಬಗೆಹರಿಸಿಕೊಳ್ಳಬಹುದು ಎಲ್ಲದಕ್ಕು ಹಿಂಸೆ, ಹತ್ಯೆಯೇ ಪರಿಹಾರವಲ್ಲ, ಜಿಹಾದಿಗಳ ಮನಸ್ಥಿತಿ ಸಂಘಟನೆ ಉಗ್ರರಿಂದ ಅಮಾಯಕ ಹಿಂದು ದರ್ಜೆಯೆ ಹತ್ಯೆ ಹಿನ್ನಲೆಯಲ್ಲಿ ಕೂಡಲೇ ರಾಜಸ್ಥಾನ ಸರ್ಕಾರದ ಮೇಲೆ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು ಒತ್ತಾಯಿಸಿದ್ದು ರಾಜಸ್ಥಾನ ಸರ್ಕಾರ ಈ ಪ್ರಕರಣದಲ್ಲಿ ಮೌನವಾಗಿದ್ದು, ಆರೋಪಿಗಳಿಗೆ ಬೆಂಬಲ ನೀಡುತ್ತಿದೆ.

ಉದಯಪುರ ವಿಚಾರದಲ್ಲಿ ಕಾಂಗ್ರೆಸ್‍ನ ವರ್ತನೆಯನ್ನು ಜನರು ಗಮನಿಸುತ್ತಿದ್ದಾರೆ. ಬಿಜೆಪಿ ಒಂದು ಜವಾಬ್ದಾರಿಯುತ ಪಕ್ಷವಾಗಿ ಇಡೀ ದೇಶದಲ್ಲಿ ಪ್ರತಿಭಟನೆ ನಡೆಸುತ್ತಿದೆ; ಇಡೀ ದೇಶದ ಜನರು ಇದನ್ನು ಖಂಡಿಸುತ್ತಿದ್ದಾರೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

error: Content is protected !!