Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಏಪ್ರಿಲ್ ತಿಂಗಳಿಂದ ಹೊಸ ರೇಷನ್ ಕಾರ್ಡ್ ವಿತರಣೆ : ಸಚಿವ ಕೆ.ಹೆಚ್. ಮುನಿಯಪ್ಪ

---Advertisement---

 

ಬೆಂಗಳೂರು: ರೇಷನ್ ಕಾರ್ಡ್ ಗಾಗಿ ಎಷ್ಟೋ ಲಕ್ಷ ಜನ ಅರ್ಜಿ ಸಲ್ಲಿಕೆ ಮಾಡುತ್ತಿರುತ್ತಾರೆ. ಆದರೆ ಎಲ್ಲರಿಗೂ ರೇಷನ್ ಕಾರ್ಡ್ ಸಿಕ್ಕಿಲ್ಲ. ಇದೀಗ ಆಹಾರ ಸಚಿವ ಕೆ ಎಚ್ ಮುನಿಯಪ್ಪ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಏಪ್ರಿಲ್ ಒಂದರಿಂದ ಹೊಸ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಲಾಗುವುದು ಎಂದಿದ್ದಾರೆ. ಈ ಮೂಲಕ ಹೊಸ ರೇಷನ್ ಕಾರ್ಡ್ ಗಾಗಿ ಕಾಯುತ್ತಿದ್ದವರಿಗೆ ಸರ್ಕಾರ ಸಂತದ ಸುದ್ದಿ‌ ನೀಡಿದೆ.

 

ಆರೋಗ್ಯ ತುರ್ತು ಕಾರಣಕ್ಕೆ 744 ಜನರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿತ್ತು. ಆರೋಗ್ಯ ಸಮಸ್ಯೆಯ ಅರ್ಜಿ ಸಲ್ಲಿಸಿದವರಿಗೆ ಮಾತ್ರ ಕಾರ್ಡ್ ವಿತರಣೆ ಮಾಡಲಾಗಿತ್ತು. ಹೊಸ ಪಡಿತರ ಚೀಟಿಗಾಗಿ ಇಲ್ಲಿಯವರೆಗೂ 2.95 ಲಕ್ಷ ಅರ್ಜಿ ಸಲ್ಲಿಕೆಯಾಗಿರುವುದು ಇನ್ನೂ ಬಾಕಿ ಉಳಿದಿದೆ. ಕಾಂಗ್ರೆಸ್ ಸರ್ಕಾರ ಇಲ್ಲಿಯವರೆಗೂ 57 ಸಾವಿರ ಹೊಸ ಕಾರ್ಡ್ ಗಳನ್ನು ವಿತರಣೆ ಮಾಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಐದು ಗ್ಯಾರಂಟಿಗಳನ್ನು ಚಾಲ್ತಿಗೆ ತಂದಿದೆ. ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ ಯೋಜನೆಯ ಲಾಭ ಪಡೆಯುವವರು ರೇಷನ್ ಕಾರ್ಡ್ ಹೊಂದಿರಲೇಬೇಕು. ಆದರೆ ರೇಷನ್ ಕಾರ್ಡ್ ಸಿಗದೆ ಕೆಲವರು ಪರದಾಡುವಂತಾಗಿದೆ. ಹೀಗಾಗಿ ಏಪ್ರಿಲ್ ಒಂದರಿಂದ ಹೊಸ ಕಾರ್ಡ್ ಕೊಡಲು ನಿರ್ಧಾರ ಮಾಡಲಾಗಿದೆ.

 

ಹಲವು ತಿಂಗಳಿನಿಂದ ಕೂಡ ಹೊಸ ರೇಷನ್ ಕಾರ್ಡ್ ವಿತರಣೆ ಮಾಡಿ ಎಂಬ ಬೇಡಿಕೆ ಇತ್ತು‌. ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡುವುದು ಕಳೆದ ಒಂದು ವರ್ಷದ ಹಿಂದೆ ಸ್ಥಗಿತಗೊಂಡಿತ್ತು. ವಿಧಾನಸಭಾ ಚುನಾವಣೆ ಬಳಿಕ ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಶುರುವಾಗುತ್ತಿರುವುದು ಹಲವರಿಗೆ ಸಂತಸ ತಂದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment