Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಕ್ಟೋಬರ್ 16ರಂದು ಚಳ್ಳಕೆರೆ ತಾಲ್ಲೂಕಿನ ರೇಣುಕಾಪುರದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

Facebook
Twitter
Telegram
WhatsApp

ಚಿತ್ರದುರ್ಗ, (ಅಕ್ಟೋಬರ್.13) :  ಚಳ್ಳಕೆರೆ ತಾಲ್ಲೂಕಿನ ರೇಣುಕಾಪುರ ಗ್ರಾಮದಲ್ಲಿ ಇದೇ ಅಕ್ಟೋಬರ್ 16 ರ ಮೂರನೇ ಶನಿವಾರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯ ಮಾಡುವರು.

ತಾತ್ಕಾಲಿಕವಾಗಿ ಕೋವಿಡ್-19ರ ಸಾಂಕ್ರಮಿಕ ರೋಗ ಹರಡುವಿಕೆಯಿಂದಾಗಿ ಸ್ಥಗಿತಗೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಪ್ರಸ್ತುತ ಇದೇ ಅಕ್ಟೋಬರ್ 16ರಿಂದ ಪುನರಾಂಭಿಸಲಾಗುತ್ತಿದೆ.

ಪ್ರಮುಖವಾಗಿ ಜಿಲ್ಲಾಧಿಕಾರಿಗಳು, ಭೂ ದಾಖಲೆಗಳ ಉಪನಿರ್ದೇಶಕರು, ಭೂ ದಾಖಲೆಗಳ ಸಹಾಯ ನಿರ್ದೇಶಕರು, ಪ್ರತಿ ತಿಂಗಳ ಮೂರನೇ ಶನಿವಾರದಂದು ಉಪವಿಭಾಗ ಮಟ್ಟದ ಸಹಾಯಕ ಆಯುಕ್ತರು, ಸಂಬಂಧಪಟ್ಟ ತಹಶೀಲ್ದಾರರು, ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಿಗರೊಂದಿಗೆ ಗ್ರಾಮಗಳಿಗೆ ಭೇಟಿ ನೀಡಿ ಹಳ್ಳಿ ವಾಸ್ತವ್ಯ ಮಾಡಿ ಗ್ರಾಮಸ್ಥರ ಅಹವಾಲುಗಳನ್ನು ಪರಿಹರಿಸಲು ಕ್ರಮಕೈಗೊಳ್ಳುವರು.

ಜಿಲ್ಲಾಧಿಕಾರಿಗಳು ಯಾವ ತಾಲ್ಲೂಕಿಗೆ ಭೇಟಿ ನೀಡುತ್ತಾರೊ ಆ ತಾಲ್ಲೂಕಿನ ತಹಶೀಲ್ದಾರರನ್ನು ಹೊರತುಪಡಿಸಿ, ಉಳಿದ ತಾಲ್ಲೂಕಿನ ತಹಶೀಲ್ದಾರರು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಅ ದಿನದಂದು ತಮ್ಮ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ಪ್ರತಿ ತಿಂಗಳು 3ನೇ ಶನಿವಾರದಂದು ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ.

ಇದೇ ಅಕ್ಟೋಬರ್16ರಂದು ಶನಿವಾರ ಆಯಾ ತಾಲ್ಲೂಕು ತಹಶೀಲ್ದಾರ್‍ಗಳ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯಕೈಗೊಳ್ಳಲು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದು, ಚಿತ್ರದುರ್ಗ ತಾಲ್ಲೂಕಿನ ತಹಶೀಲ್ದಾರ್ ಕೊಡಗವಳ್ಳಿ, ಹಿರಿಯೂರು ತಹಶೀಲ್ದಾರ್ ಸೀಗೆಹಟ್ಟಿ, ಹೊಸದುರ್ಗ ತಹಶೀಲ್ದಾರ್ ಬೇವಿನಹಳ್ಳಿ, ಹೊಳಲ್ಕೆರೆ ತಹಶೀಲ್ದಾರ್ ಪಾಪೇನಹಳ್ಳಿ, ಮೊಳಕಾಲ್ಮೂರು ತಾಲ್ಲೂಕಿನ ತಹಶೀಲ್ದಾರ್ ಚಿಕ್ಕುಂತಿ ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ್ಯ ಮಾಡುವರು.

ಗ್ರಾಮಗಳಿಗೆ ಭೇಟಿ ನೀಡುವ ಒಂದು ವಾರದ ಮೊದಲೇ ಕಂದಾಯ ಅಧಿಕಾರಿಗಳು ಗ್ರಾಮ ಭೇಟಿ ಸಮಯದಲ್ಲಿ  ನೀಡಲಾಗಿರುವ ಕಾರ್ಯಸೂಚಿಗಳನ್ವಯ ಫಲಾನುಭವಿಗಳ ಅರ್ಜಿಗಳನ್ನು ಸಂಗ್ರಹಿಸಿ, ಅರ್ಜಿಗಳ ಮೇಲೆ ಯಾರ ಹಂತದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಗ್ರಾಮ ವಾಸ್ತವ್ಯಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ವಿಲೇವಾರಿ ಯಾಗುವ ಬಗ್ಗೆ ಸಂಬಂಧಪಟ್ಟ ಫಲಾನುಭವಿಗಳಿಗೆ ತಿಳಿಸಲಾಗುವುದು. ಅರ್ಜಿಗಳ ಮೇಲೆ ಬೇರೆ ಬೇರೆ ಹಂತದಲ್ಲಿ ವಿಚಾರಣೆಯ ಅವಶ್ಯಕತೆ ಇದ್ದಲ್ಲಿ ಅದನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದು. ಗ್ರಾಮ ಭೇಟಿ ಸಮಯದಲ್ಲಿ ಸಾರ್ವಜನಿಕರ ಅಹವಾಲು, ಬೇಡಿಕೆಗಳನ್ನು ಸ್ವೀಕರಿಸಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!