Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಕ್ಟೋಬರ್ 04 ರಿಂದ 07 ರವರೆಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಜಯದೇವ ಕಪ್ ಕ್ರೀಡಾಕೂಟ

Facebook
Twitter
Telegram
WhatsApp

 

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 24 : ಚಿತ್ರದುರ್ಗ ಮುರುಘರಾಜೇಂದ್ರ ಶ್ರೀಮಠದ ವತಿಯಿಂದ ಪ್ರತಿ ವರ್ಷ ದಸರಾ ಹಬ್ಬದ ಪ್ರಯುಕ್ತ ಶರಣಸಂಸ್ಕೃತಿ ಉತ್ಸವ ಆಚರಿಸಲಾಗುತ್ತಿದ್ದು, ಈ ವರ್ಷ ಶ್ರೀ ಜಯದೇವ ಮುರುಘರಾಜೇಂದ್ರ ಮಹಾ ಸ್ವಾಮೀಜಿಗಳ 150ನೇ ಜಯಂತಿ ಅಂಗವಾಗಿ ಜಯದೇವ ಕಪ್-2024 ಕ್ರೀಡಾ ಜಾತ್ರೆಯನ್ನು ಸಂಘಟಿಸಲಾಗುತ್ತಿದ್ದು, ಈ ಪ್ರಯುಕ್ತ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಅಕ್ಟೋಬರ್ 04 ರಿಂದ 07 ರವರೆಗೆ ಜಿಲ್ಲಾ ಮಟ್ಟದ ಕ್ರೀಡಾ ವಿಭಾಗದಲ್ಲಿ ಸ್ಥಳೀಯ ಪ್ರತಿಭೆಗಳಿಗೆ ಸಹಕಾರಿಯಾಗುವಂತೆ ಪ್ರೌಢಶಾಲಾ ಬಾಲಕ, ಬಾಲಕಿಯರಿಗಾಗಿ (17ವರ್ಷ ಒಳಗಿನವರಿಗೆ) ಕಬಡ್ಡಿ, ಖೋ ಖೋ, ವಾಲಿಬಾಲ್ ಹಾಗೂ ಹ್ಯಾಂಡ್ ಬಾಲ್, ಹೊನಲು ಬೆಳಕಿನ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ.

ಈ ಪಂದ್ಯಾವಳಿಗಳಿಗೆ ಇಲಾಖೆಯಿಂದ ತಾಲ್ಲೂಕು ಮಟ್ಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ತಂಡಗಳಿಗೆ ಅವಕಾಶ ಕಲ್ಪಿಸಲಾಗಿದೆ. ಹಾಗೆಯೇ ಹೊರ ತಾಲ್ಲೂಕುಗಳಿಂದ ಬರುವ ಕ್ರೀಡಾ ಪಟುಗಳಿಗೆ ವಸತಿ, ಊಟ, ತಿಂಡಿ, ವ್ಯವಸ್ಥೆ ಇದ್ದು, ಬಂದು ಹೋಗುವ ಪ್ರಯಾಣ ಭತ್ಯೆಯನ್ನು ಸಹ ನೀಡಲಾಗುವುದು. ಪಂದ್ಯಾವಳಿಯಲ್ಲಿ ಪ್ರಥಮ, ದ್ವಿತೀಯ, ತೃತೀಯ, ಚತುರ್ಥ ಸ್ಥಾನ ಪಡೆದ ತಂಡಗಳಿಗೆ ಕ್ರಮವಾಗಿ ರೂ.10,000, 8,000, 6,000, 4000 ನಗದು ಹಾಗೂ ಆಕರ್ಷಕ ಟ್ರೋಪಿ, ಮೆಡಲ್, ಟೀ ಷರ್ಟ್, ಕ್ರೀಡಾ ಪರಿಕರಗಳು ಮತ್ತು ವೈಯಕ್ತಿಕ ವಿಶೇಷ ಟ್ರೋಪಿ ಸಹ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ನಾಳೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.28 : ಸುಖಾಯು‌ ಆಯುರ್ವೇದ ಕ್ಲಿನಿಕ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಹಾಗೂ ಉಚಿತ ಆರೋಗ್ಯ ಸಲಹಾ ಶಿಬಿರವನ್ನು ನಗರದ ಸಾದಿಕ್ ನಗರದ ನಿವಾಸಿಗಳಿಗೆ ನಾಳೆ (ಸೆಪ್ಟೆಂಬರ್. 29 ರ ಭಾನುವಾರ)

ಈ ರಾಶಿಯವರ ಜೊತೆ ಮದುವೆಯಾಗಿ ಕೆಲವೇ ದಿನವೊಳಗೆ ಬಯಲಾಯಿತು ದುರ್ಬುದ್ಧಿ!

ಈ ರಾಶಿಯವರಿಗೆ ಕೈ ತುಂಬಾ ಹಣಪ್ರಾಪ್ತಿ. ಈ ರಾಶಿಯವರ ಜೊತೆ ಮದುವೆಯಾಗಿ ಕೆಲವೇ ದಿನವೊಳಗೆ ಬಯಲಾಯಿತು ದುರ್ಬುದ್ಧಿ! ಶನಿವಾರರಾಶಿ ಭವಿಷ್ಯ -ಸೆಪ್ಟೆಂಬರ್-28,2024 ಇಂದಿರಾ ಏಕಾದಶಿ ಸೂರ್ಯೋದಯ: 06:09, ಸೂರ್ಯಾಸ್ತ : 06:03 ಶಾಲಿವಾಹನ ಶಕೆ

ಎರಡನೆ ದಿನಕ್ಕೆ ಕಾಲಿಟ್ಟ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹೆಚ್ಚಿನ ಒತ್ತಡವಾಗುವುದು ಸೇರಿದಂತೆ

error: Content is protected !!