Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಅಡಿಕೆ ಬೆಳೆಗಾರರು ವಂಚನೆಗೆ ಒಳಗಾಗದಂತೆ ಜಿಲ್ಲಾ ಪೊಲೀಸ್ ಮನವಿ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 23 : ರೈತರು ಮತ್ತು ಮಧ್ಯವರ್ತಿಗಳ ವಿಚಾರ ಆಗಾಗ ಸದ್ದು ಮಾಡುತ್ತಾ ಇರುತ್ತದೆ. ಈ ಮಧ್ಯವರ್ತಿಗಳಿಂದಾನೇ ಎಷ್ಟೋ ರೈತರಿಗೆ ನಷ್ಟವಾಗುತ್ತದೆ. ಇದೀಗ ಕೋಟೆನಾಡಿನಲ್ಲಿ ರೈತರಿಗೆ ಮುನ್ನೆಚ್ಚರಿಕೆ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.

‘ಈ ಮೂಲಕ ಚಿತ್ರದುರ್ಗ ಜಿಲ್ಲೆಯ ಅಡಿಕೆ ಬೆಳೆಗಾರರಲ್ಲಿ ತಿಳಿಯಪಡಿಸುವುದೇನೆಂದರೆ, 2024 ನೇ ಸಾಲಿನ ಅಡಿಕೆ ಫಸಲು ಕೊಯ್ಲಿನ ಕಾಲ ಆರಂಭವಾಗಿದೆ. ಅಡಿಕೆ ಬೆಳೆಗಾರರು ತಮ್ಮ ತೋಟಗಳಲ್ಲಿಯೇ ಅಡಿಕೆಯನ್ನು ಮಾರಾಟ ಮಾಡುತ್ತಿರುತ್ತಾರೆ. ಅಂದರೆ ತೋಟವನ್ನು ಪೇಣಿಗೆ ನೀಡುವುದು, ಹಸಿ ಅಡಿಕೆಯನ್ನೇ ಮಾರುವುದು, ಇಲ್ಲವೇ ಒಣ ಅಡಿಕೆ ತಯಾರಿಸಿ ಮಾರುವುದು ಇತ್ಯಾದಿ. ಇದೇ ರೀತಿಯಾಗಿ ಕಳೆದ ವರ್ಷಗಳಲ್ಲಿ ನಡೆದ ವಹಿವಾಟಿನಲ್ಲಿ ರೈತರಿಗೆ ವ್ಯಾಪಾರಸ್ಥರು ಸರಿಯಾಗಿ ಹಣವನ್ನು ಬಟವಾಡೆ ಮಾಡದೇ ಸತಾಯಿಸಿದ್ದಾರೆ. ಈ ಬಗ್ಗೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಈ ಸಂಬಂಧ ತನಿಖೆ ಕೂಡ ನಡೆಯುತ್ತಿದೆ. ಹಲವು ರೈತರು ವಂಚನೆಗೆ ಒಳಗಾಗಿರುತ್ತಾರೆ.

ಕಳೆದ ಸಾಲಿನಲ್ಲಿ ಕೆಲವು ರೈತರಿಗೆ ಆಗಿರುವ ಕಹಿ ಅನುಭವದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಅಡಿಕೆ ಬೆಳೆಗಾರರಲ್ಲಿ ಕೋರುವುದೇನೆಂದರೆ, ಈ ಮೇಲ್ಕಂಡಂತೆ ಅಡಿಕೆ ಮಾರಾಟದ ಸಮಯದಲ್ಲಿ ಮುಂಗಡವಾಗಿ ಎಲ್ಲಾ ಹಣವನ್ನು ಪಡೆದು ಮಾರಾಟ ಮಾಡುವುದು ಸರ್ವತಾ ಉತ್ತಮ, ರೈತರು ಬರೀ ನಂಬಿಕೆಗಳ ಮೇಲೆ ಇಲ್ಲವೇ ಚೀಟಿಗಳ ಮೇಲೆ ಬರೆದುಕೊಂಡು ವ್ಯವಹಾರ ನಡೆಸುತ್ತಿದ್ದು, ಈ ರೀತಿಯ ವಹಿವಾಟಿನಲ್ಲಿ ವ್ಯಾಪಾರಸ್ಥರು ರೈತರಿಗೆ ಹಣ ನೀಡದಿದ್ದಾಗ, ಕಾನೂನಿನ ಮೂಲಕ ರೈತರು ಹಣವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ರೈತರು ತಮ್ಮ ಅಡಿಕೆ ಮಾರುವ ಸಮಯದಲ್ಲಿ ಮುಂಗಡವಾಗಿ ಎಲ್ಲಾ ಹಣವನ್ನು ಪಡೆಯಲು ಸಾಧ್ಯವಾಗದಿದ್ದಲ್ಲಿ ವ್ಯಾಪಾರಸ್ಥರು ಅಥವಾ ಖೇಣಿದಾರರಿಂದ ಕಾನೂನಿನ ಅಡಿಯಲ್ಲಿ ಮಾನ್ಯತೆ ಪಡೆದಿರುವ Negotiable instrument ಗಳಾದ ಚೆಕ್ ಅಥವಾ ಪ್ರಾಮಿಸರಿ ನೋಟ್ ಅಥವಾ Bill of Exchange ನಂತಹ ಸೂಕ್ತ ಭದ್ರತೆ ಪಡೆದುಕೊಂಡು ವಂಚನೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಿ ತಮ್ಮ ಬೆಳೆಯನ್ನು ಮಾರಾಟ ಮಾಡಲು ಕೋರಿದೆ’ ಎಂದು ಪ್ರಕಟಣೆಯ ಮೂಲಕ ಎಸ್. ಪಿ. ರಂಜಿತ್ ಕುಮಾರ್ ಬಂಡಾರು ಮನವಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

ಶಾಸಕ ಮುನಿರತ್ನ ವಿರುದ್ಧ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ : ಎಸ್.ಜಯಣ್ಣ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಗುತ್ತಿಗೆದಾರನನ್ನು ಮನೆಗೆ ಕರೆಸಿಕೊಂಡು ಲಂಚಕ್ಕೆ ಬೇಡಿಕೆಯಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬೆಂಗಳೂರು ರಾಜರಾಜೇಶ್ವರಿ

error: Content is protected !!