Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಿಲ್ಲಾ, ತಾಲೂಕು ಪಂಚಾಯಿತಿ, ಗ್ರಾಪಂ ಚುನಾವಣೆ ; ಸಚಿವ ಈಶ್ವರ್ ಖಂಡ್ರೆ ಹೇಳಿದ್ದೇನು?

---Advertisement---

ದಾವಣಗೆರೆ.ಜುಲೈ.02: ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆ ಎದುರು ನೋಡುತ್ತಿದ್ದ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಪ್ರಸಕ್ತ ವರ್ಷದ ಕೊನೆಯೊಳಗೆ ಎಲ್ಲಾ ಹಂತದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಭರದ ಸಿದ್ಧತೆ ಮಾಡಿಕೊಳ್ಳುತ್ತಿದೆ.

ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಅವರು, ಮುಂಬರುವ ಸೆಪ್ಟೆಂಬರ್ ತಿಂಗಳ ಒಳಗಾಗಿ ಮೀಸಲಾತಿ ಕ್ಷೇತ್ರಗಳ ಮರು ವಿಂಗಡಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಇದಾದ ಬೆನ್ನಲ್ಲೇ, ಅಂದರೆ ಅಕ್ಟೋಬರ್ ಅಥವಾ ನವೆಂಬರ್ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಪ್ರಕ್ರಿಯೆ ನಡೆಸಲು ಸರ್ಕಾರ ಉದ್ದೇಶಿಸಿದೆ.

ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿಯೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಸುದೀರ್ಘ ಚರ್ಚೆಗಳು ನಡೆದಿದ್ದು, ಪ್ರಸಕ್ತ ವರ್ಷದಲ್ಲೇ ಎಲ್ಲಾ ಚುನಾವಣೆಗಳನ್ನು ಮುಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ. ಸರ್ಕಾರದ ಈ ನಿರ್ಧಾರದಿಂದಾಗಿ ದೀರ್ಘಕಾಲದಿಂದ ಚುನಾವಣೆಯ ನಿರೀಕ್ಷೆಯಲ್ಲಿದ್ದ ಗ್ರಾಮೀಣ ಭಾಗದ ನಾಯಕರಲ್ಲಿ ಹೊಸ ಸಂಚಲನ ಮೂಡಿದೆ.

Join WhatsApp

Join Now

Join Telegram

Join Now