Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಿಲ್ಲಾ ನೀರು ಪರೀಕ್ಷಾ ಪ್ರಯೋಗಾಲಯ: ಸಚಿವ ಡಿ.ಸುಧಾಕರ್ ಅವರಿಂದ ಉದ್ಘಾಟನೆ

---Advertisement---

ಚಿತ್ರದುರ್ಗ. ಆಗಸ್ಟ್ 04: ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಸ್ಥಾಪಿಸಲಾಗಿರುವ ಜಿಲ್ಲಾ ನೀರು ಪರೀಕ್ಷಾ ಪ್ರಯೋಗಾಲಯವನ್ನು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೋಮವಾರ ಉದ್ಘಾಟಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖಾ ವತಿಯಿಂದ ಮೈಕ್ರೋ ಬಯಾಲಜಿ ಪ್ರಯೋಗಾಲಯವನ್ನು ನಿರ್ಮಿಸಿದ್ದು, ಪ್ರಯೋಗಾಲಯದ ಮೂಲ ಉದ್ದೇಶ ಕುಡಿಯುವ ನೀರಿನಲ್ಲಿರುವ ಸೂಕ್ಷ್ಮಾಣು ಜೀವಿಗಳನ್ನು ಪರೀಕ್ಷಿಸುವುದಾಗಿದೆ.

ಪ್ರಯೋಗಾಲಯದ ನವೀಕರಣಕ್ಕಾಗಿ WQMSP ಲೆಕ್ಕ ಶೀರ್ಷಿಕೆಯಡಿ ರೂ. 23.60 ಲಕ್ಷ ನಿಗಧಿಯಾಗಿದ್ದು, ಪ್ರಯೋಗಾಲಯದ ಉಪಕರಣಗಳಿಗಾಗಿ ರೂ. 21.57 ಲಕ್ಷ ಹಾಗೂ ಕೆಮಿಕಲ್ಸ್ ಗಾಗಿ ರೂ. 9.63 ಲಕ್ಷಗಳ ಕ್ರಿಯಾ ಯೋಜನೆ ಅನುಮೋದನೆಯಾಗಿದ್ದು,  ಗ್ರಾಮೀಣ ಪ್ರದೇಶದಲ್ಲಿ ಕಾಡುತ್ತಿರುವ ಸಾಂಕ್ರಾಮಿಕ, ವಾಂತಿ ಮತ್ತು ಅತಿಸಾರ ಪ್ರಕರಣಗಳನ್ನು ತಡೆಗಟ್ಟುವುದು ಈ ಪ್ರಯೋಗಾಲಯದ ಮೂಲ ಉದ್ದೇಶವಾಗಿದೆ.

ನೀರಿನ ಮಾದರಿಯಲ್ಲಿ ಸೂಕ್ಷ್ಮ ಜೀವಿಗಳನ್ನು ಅಂದರೆ
E-coli, Coliform  ಅಂತ ಜೀವಿಗಳು ಕಂಡು ಬಂದರೆ ಕೂಡಲೆ ಗ್ರಾಮ ಮಟ್ಟದಲ್ಲಿ ಜನಗಳಿಗೆ ಕಾಯಿಲೆಯ ಹಾಗೂ ಇನ್ನಿತರೆ ತೊಂದರೆಗಳ ಬಗ್ಗೆ ಎಚ್ಚರಿಕೆ ಮತ್ತು ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದಾಗಿದೆ. ಬೋರ್‍ವೆಲ್, ಸಿಂಟೆಕ್ಸ್ ವಾಟರ್, ಆರ್‍ಓ ಘಟಕದ ನೀರು ಹಾಗೂ ಕುಡಿಯುವ ನೀರಿನ ಮೂಲಗಳನ್ನು ಈ ಪ್ರಯೋಗಾಲಯದಲ್ಲಿ ಪರೀಕ್ಷಿಸಬಹುದಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಬಸನಗೌಡ ಪಾಟೀಲ್ ಸೇರಿದಂತೆ ಮತ್ತಿತರರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...