Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಿನಪತ್ರಿಕೆ ವಿತರಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾ ಕಾರ್ಯನಿರತ ಪತ್ರಿಕಾ ವಿತರಕರ/ಹಂಚಿಕೆದಾರರ ಸಂಘ ಒತ್ತಾಯ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜೂ.21) : ದಿನಪತ್ರಿಕೆ ವಿತರಕರಿಗಾಗಿ ಕ್ಷೇಮಾಭಿವೃದ್ದಿ ನಿಧಿ ಸ್ಥಾಪಿಸುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ(ರಿ) ಬೆಂಗಳೂರು, ಜಿಲ್ಲಾ ಕಾರ್ಯನಿರತ ಪತ್ರಿಕಾ ವಿತರಕರ/ಹಂಚಿಕೆದಾರರ ಸಂಘದಿಂದ ಬುಧವಾರ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಪತ್ರಿಕಾ ವಿತರಕರಿಗೆ ಈವಿಎಂ ಬೈಕ್ ಹಾಗೂ ಮೊಪೆಡ್ ತೆಗೆದುಕೊಳ್ಳಲು ಹೆಚ್ಚುವರಿಯಾಗಿ ಸಬ್ಸಿಡಿ ಮಂಜೂರು ಮಾಡುವುದು, 0 ಪರ್ಸೆಂಟ್ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಬೇಕು.
ಪತ್ರಿಕಾ ವಿತರಕರು ಪತ್ರಿಕೆ ಹಂಚುವ ಸಂದರ್ಭದಲ್ಲಿ ಮೃತಪಟ್ಟಲ್ಲಿ ಐದು ಲಕ್ಷ ರೂ. ಸಹಾಯಧನ ನೀಡಬೇಕು. ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಆಸ್ಪತ್ರೆ ವೆಚ್ಚ ಭರಿಸಬೇಕು.

ಪತ್ರಿಕಾ ವಿತರಕರ ಮಕ್ಕಳಿಗಾಗಿ ಉಚಿತ ಶಿಕ್ಷಣ ಸೌಲಭ್ಯ ಒದಗಿಸುವುದು. ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಹಾಯ ಧನ ಕೊಡಬೇಕು. 65 ವರ್ಷ ಮೇಲ್ಪಟ್ಟ ಪತ್ರಿಕಾ ವಿತರಕರಿಗೆ ಅವರ ವೃತ್ತಿಯನ್ನು ಗೌರವಿಸಿ ಪಿಂಚಣಿ ಸೌಲಭ್ಯ ಕೊಡಬೇಕು. ಪತ್ರಿಕಾ ವಿತರಕರನ್ನು ರಾಜ್ಯೋತ್ಸವ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿಗೆ ಪರಿಗಣಿಸಿ ಗೌರವಿಸಬೇಕು.
ಆಶ್ರಯ ಯೋಜನೆಯಡಿ ಪತ್ರಿಕಾ ವಿತರಕರಿಗೂ ನಿವೇಶನಗಳನ್ನು ನೀಡಬೇಕೆಂದು ರಾಜ್ಯ ಸರ್ಕಾರವನ್ನು ಕೋರಿದರು.

2013 ರ ಅವಧಿಯಲ್ಲಿ ತಾವುಗಳು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ 2018-19 ರ ಬಜೆಟ್‍ನಲ್ಲಿ ಪತ್ರಿಕಾ ವಿತರಕರ ಕ್ಷೇಮಾಭಿವೃದ್ದಿ ನಿಧಿಗಾಗಿ ಎರಡು ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದೀರಿ. ಬಿಜೆಪಿ.ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗ ಜಾರಿಯಾಗಲಿಲ್ಲ. ಹಾಗಾಗಿ ನಮ್ಮ ಎಲ್ಲಾ ಬೇಡಿಕೆಗಳನ್ನು ಪರಿಗಣಿಸಿ ಈಡೇರಿಸುವಂತೆ ಜಿಲ್ಲಾ ಕಾರ್ಯನಿರತ ಪತ್ರಿಕಾ ವಿತರಕರ/ಹಂಚಿಕೆದಾರರ ಸಂಘದ ಅಧ್ಯಕ್ಷ ಎಸ್.ತಿಪ್ಪೇಸ್ವಾಮಿ ಜಿಲ್ಲಾಡಳಿತ ಮೂಲಕ ರಾಜ್ಯದ ಮುಖ್ಯಮಂತ್ರಿಯನ್ನು ಆಗ್ರಹಿಸಿದರು.

ಉಪಾಧ್ಯಕ್ಷ ಕುಬೇಂದ್ರಪ್ಪ, ಮೋಹನ್‍ಕುಮಾರ್, ಮಲ್ಲಿಕಾರ್ಜುನ್, ಆರ್.ಪ್ರಶಾಂತ್, ಕರಿಯಪ್ಪ, ನಾಗರಾಜ್‍ಶೆಟ್ಟಿ, ತಿಪ್ಪೇಸ್ವಾಮಿ ಜಿ. ಕರಿಬಸಪ್ಪ, ಸುನೀಲ್, ಮಂಜುನಾಥನಾಯ್ಡು, ಮಾರುತಿ, ತಿಪ್ಪೇಸ್ವಾಮಿ, ಮೈಲಾರಿ, ಓಂಕಾರಪ್ಪ, ದುಗ್ಗಪ್ಪ, ಚಂದ್ರಶೇಖರ್ ಸೇರಿದಂತೆ ಅನೇಕ ವಿತರಕರು ಈ ಸಂದರ್ಭದಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!