Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಿನಪತ್ರಿಕೆ ವಿತರಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾ ಕಾರ್ಯನಿರತ ಪತ್ರಿಕಾ ವಿತರಕರ/ಹಂಚಿಕೆದಾರರ ಸಂಘ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜೂ.21) : ದಿನಪತ್ರಿಕೆ ವಿತರಕರಿಗಾಗಿ ಕ್ಷೇಮಾಭಿವೃದ್ದಿ ನಿಧಿ ಸ್ಥಾಪಿಸುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ(ರಿ) ಬೆಂಗಳೂರು, ಜಿಲ್ಲಾ ಕಾರ್ಯನಿರತ ಪತ್ರಿಕಾ ವಿತರಕರ/ಹಂಚಿಕೆದಾರರ ಸಂಘದಿಂದ ಬುಧವಾರ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಪತ್ರಿಕಾ ವಿತರಕರಿಗೆ ಈವಿಎಂ ಬೈಕ್ ಹಾಗೂ ಮೊಪೆಡ್ ತೆಗೆದುಕೊಳ್ಳಲು ಹೆಚ್ಚುವರಿಯಾಗಿ ಸಬ್ಸಿಡಿ ಮಂಜೂರು ಮಾಡುವುದು, 0 ಪರ್ಸೆಂಟ್ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಬೇಕು.
ಪತ್ರಿಕಾ ವಿತರಕರು ಪತ್ರಿಕೆ ಹಂಚುವ ಸಂದರ್ಭದಲ್ಲಿ ಮೃತಪಟ್ಟಲ್ಲಿ ಐದು ಲಕ್ಷ ರೂ. ಸಹಾಯಧನ ನೀಡಬೇಕು. ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಆಸ್ಪತ್ರೆ ವೆಚ್ಚ ಭರಿಸಬೇಕು.

ಪತ್ರಿಕಾ ವಿತರಕರ ಮಕ್ಕಳಿಗಾಗಿ ಉಚಿತ ಶಿಕ್ಷಣ ಸೌಲಭ್ಯ ಒದಗಿಸುವುದು. ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಹಾಯ ಧನ ಕೊಡಬೇಕು. 65 ವರ್ಷ ಮೇಲ್ಪಟ್ಟ ಪತ್ರಿಕಾ ವಿತರಕರಿಗೆ ಅವರ ವೃತ್ತಿಯನ್ನು ಗೌರವಿಸಿ ಪಿಂಚಣಿ ಸೌಲಭ್ಯ ಕೊಡಬೇಕು. ಪತ್ರಿಕಾ ವಿತರಕರನ್ನು ರಾಜ್ಯೋತ್ಸವ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿಗೆ ಪರಿಗಣಿಸಿ ಗೌರವಿಸಬೇಕು.
ಆಶ್ರಯ ಯೋಜನೆಯಡಿ ಪತ್ರಿಕಾ ವಿತರಕರಿಗೂ ನಿವೇಶನಗಳನ್ನು ನೀಡಬೇಕೆಂದು ರಾಜ್ಯ ಸರ್ಕಾರವನ್ನು ಕೋರಿದರು.

2013 ರ ಅವಧಿಯಲ್ಲಿ ತಾವುಗಳು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ 2018-19 ರ ಬಜೆಟ್‍ನಲ್ಲಿ ಪತ್ರಿಕಾ ವಿತರಕರ ಕ್ಷೇಮಾಭಿವೃದ್ದಿ ನಿಧಿಗಾಗಿ ಎರಡು ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದೀರಿ. ಬಿಜೆಪಿ.ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗ ಜಾರಿಯಾಗಲಿಲ್ಲ. ಹಾಗಾಗಿ ನಮ್ಮ ಎಲ್ಲಾ ಬೇಡಿಕೆಗಳನ್ನು ಪರಿಗಣಿಸಿ ಈಡೇರಿಸುವಂತೆ ಜಿಲ್ಲಾ ಕಾರ್ಯನಿರತ ಪತ್ರಿಕಾ ವಿತರಕರ/ಹಂಚಿಕೆದಾರರ ಸಂಘದ ಅಧ್ಯಕ್ಷ ಎಸ್.ತಿಪ್ಪೇಸ್ವಾಮಿ ಜಿಲ್ಲಾಡಳಿತ ಮೂಲಕ ರಾಜ್ಯದ ಮುಖ್ಯಮಂತ್ರಿಯನ್ನು ಆಗ್ರಹಿಸಿದರು.

ಉಪಾಧ್ಯಕ್ಷ ಕುಬೇಂದ್ರಪ್ಪ, ಮೋಹನ್‍ಕುಮಾರ್, ಮಲ್ಲಿಕಾರ್ಜುನ್, ಆರ್.ಪ್ರಶಾಂತ್, ಕರಿಯಪ್ಪ, ನಾಗರಾಜ್‍ಶೆಟ್ಟಿ, ತಿಪ್ಪೇಸ್ವಾಮಿ ಜಿ. ಕರಿಬಸಪ್ಪ, ಸುನೀಲ್, ಮಂಜುನಾಥನಾಯ್ಡು, ಮಾರುತಿ, ತಿಪ್ಪೇಸ್ವಾಮಿ, ಮೈಲಾರಿ, ಓಂಕಾರಪ್ಪ, ದುಗ್ಗಪ್ಪ, ಚಂದ್ರಶೇಖರ್ ಸೇರಿದಂತೆ ಅನೇಕ ವಿತರಕರು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...