Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆಡಿಪಿ ಸಭೆಯಲ್ಲಿ ಸದ್ದು ಮಾಡಿದ ಡಿವೈಡರ್ ಸಮಸ್ಯೆ : ಶಾಸಕ ಕೆ.ಸಿ.ವೀರೇಂದ್ರ ಹೇಳಿದ್ದೇನು ?

---Advertisement---

ಸುದ್ದಿಒನ್, ಚಿತ್ರದುರ್ಗ, (ಜೂ.23) : ನಗರದ ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣವಾಗಿರುವ ಡಿವೈಡರ್‍ಗಳದ್ದು, ಪ್ರಮುಖ ಸಮಸ್ಯೆಯಾಗಿದೆ ಎಂದು ಶಾಸಕ ಕೆ.ಸಿ. ವೀರೇಂದ್ರ ಅವರು ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾದ ಈ ಸಾಲಿನ ಮೊದಲ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಹೋಗುವ ಏಕಮುಖ ಸಂಚಾರವಿರುವ ರಸ್ತೆಯಲ್ಲೂ ಡಿವೈಡರ್ ನಿರ್ಮಿಸಿದ್ದೀರಿ, ಸಾರ್ವಜನಿಕರು, ವಾಹನ ಚಾಲಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ, ಡಿವೈಡರ್‍ಗಳನ್ನು ಯಾವಾಗ ತೆರವುಗೊಳಿಸುತ್ತೀರಿ ಎಂದು ನಿತ್ಯ ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಈ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು.

ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಮಲ್ಲಿಕಾರ್ಜುನ್ ಅವರು ಉತ್ತರಿಸಿ, ರಸ್ತೆ, ಡಿವೈಡರ್, ಡಿವೈಡರ್ ಮೇಲೆ ಅಲಂಕಾರಿಕ ಗಿಡ ಸೇರಿದಂತೆ ಒಟ್ಟು 32 ಕೋಟಿ ರೂ. ಅನುದಾನದಡಿ ನಿರ್ಮಿಸಲಾಗಿದೆ, ಡಿವೈಡರ್ ಬಗೆಗಿನ ಸಮಸ್ಯೆ ಬಗ್ಗೆ ಸಮೀಕ್ಷಾ ವರದಿ ಪಡೆಯಲಾಗುತ್ತಿದ್ದು, ಇದರ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಾದೇಶಿಕ ಆಯುಕ್ತ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲನ್ ಆದಿತ್ಯ ಬಿಸ್ವಾಸ್ ಅವರು ಪ್ರತಿಕ್ರಿಯಿಸಿ, ಚಿತ್ರದುರ್ಗ ನಗರದಲ್ಲಿನ ಡಿವೈಡರ್‍ಗಳನ್ನು ನಾನು ಗಮನಿಸಿದ್ದು, ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ,  ಅಧಿಕಾರಿಗಳು ಬ್ಲಾಕ್‍ಸ್ಪಾಟ್, ತಿರುವು ಪ್ರದೇಶಗಳು ಇವೆಲ್ಲವುಗಳನ್ನು ಗಮನದಲ್ಲಿಟ್ಟುಕೊಂಡು, ಸೋಮವಾರದೊಳಗೆ ವರದಿಯನ್ನು ಸಲ್ಲಿಸಬೇಕು, ಸಮಸ್ಯೆ ಪರಿಹಾರ ಆಗುವವರೆಗೆ ಗುತ್ತಿಗೆದಾರರಿಗೆ ಹಣ ಪಾವತಿಸಬಾರದು ಎಂದು ತಾಕೀತು ಮಾಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment