ಬೆಂಗಳೂರು: ಬಿಜೆಪಿಯ 10 ಶಾಸಕರನ್ನು ಸ್ಪೀಕರ್ ಅಮಾನತು ಮಾಡಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಕುಮಾರಸ್ವಾಮಿ, ಇಂಥ ಘಟನೆ ಎಂದೆಂದೂ ಆಗಿರಲಿಲ್ಲ. ಪೇಪರ್ ಎಸೆದಿದ್ದಕ್ಕೆ ಶಿಕ್ಷೆ ನೀಡುತ್ತಾರೆ. ಮಕ್ಕಳಿಗೆ ಶಿಕ್ಷ ಕೊಟ್ಟಂತೆ ಕೊಟ್ಟಿದ್ದಾರೆ. ದಲಿತ ಅನ್ನೋ ಪದ ಬಳಕೆ ಮಾಡ್ತಿದ್ದಾರೆ. ಈಗ ದಲಿತ ಅನ್ನೋ ಅನುಕಂಪ ಯಾಕೆ..? ರಾಜಕೀಯ ಲಾಭ ಮಾಡಿಕೊಳ್ಳಲು ಹೊರಟಿದ್ದೀರಾ ಎಂದು ಕಾಂಗ್ರೆಸ್ ನಾಯಕರಿಗೆ ಪ್ರಶ್ನೆ ಮಾಡಿದ್ದಾರೆ.
ಇದೆ ವಿಚಾರವಾಗಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿ ಶಾಸಕರು ಹತಾಶೆಯಿಂದ ಗುಂಡಾ ವರ್ತನೆ ತೋರಿದ್ದಾರೆ. ದಲಿತ ಡೆಪ್ಯುಟಿ ಸ್ಪೀಕರ್ ಮೇಲೆ ಪೇಪರ್ ಹರಿದು ಹಾಕಿದ್ದಾರೆ. ಬಿಜೆಪಿಯವರು ಮಹಾಭಾರತ ನಾಟಕವನ್ನು ತೋರಿಸಿದ್ದಾರೆ ಎಂದಿದ್ದಾರೆ.

ಇನ್ನು ಬಿಜೆಪಿಯವರ ಪ್ರತಿಭಟನೆಗೆ ಜೆಡಿಎಸ್ ನಾಯಕರ ಬೆಂಬಲ ವಿಚಾರವಾಗಿ ಮಾತನಾಡಿ, ಜೆಡಿಎಸ್ ನವರು ಇನ್ನೂ ಏನು ಅಂತ ಸ್ಪಷ್ಟವಾಗಿಲ್ಲ. ಎಚ್ ಡಿ ದೇವೇಗೌಡರು, ಇಬ್ರಾಹಿಂ ಅವರು ಇನ್ನು ಏನನ್ನು ಹೇಳಿಲ್ಲ. ಬೆಂಬಲ ಕೊಡುವುದು ಅವರಿಗೆ ಬಿಟ್ಟಿದ್ದು ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















