Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆಶಿ ರಕ್ತ ಡೇಂಜರ್ ಇದೆ : ಸಿಟಿ ರವಿ

Facebook
Twitter
Telegram
WhatsApp

 

ನವದೆಹಲಿ: ನಿನ್ನೆ ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಇಡೀ ರಾಜ್ಯವೇ ಮರೆಯದಂತ ಘಟನೆ ನಡೆದಿದೆ. ಅದು ಸಂಸದರು ಮತ್ತು ಸಚಿವರಿ, ಸಿಎಂ ಎದುರಲ್ಲೇ ಕಿತ್ತಾಡಿಕೊಂಡಿದ್ದು. ಆ ಘಟನೆಗೆ ಈಗಾಗಲೇ ಸಾಕಷ್ಟು ವಿರೋಧ ಕೂಡ ವ್ಯಕ್ತವಾಗುತ್ತಿದೆ. ಈ ಬಗ್ಗೆ ಇದೀಗ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ರಕ್ತದ ಬಗ್ಗೆ ಮಾತನಾಡಿದ್ದಾರೆ.

ಗಲಾಟೆ ವೇಳೆ ಅಶ್ವಥ್ ನಾರಾಯಣ ಅವರು ಬಳಸಿದ್ದ ಗಂಡಸ್ತನ ಪದದ ಬಗ್ಗೆ ಸಿ ಟಿ ರವಿ ಅವರು ಸಮರ್ಥಿಸಿಕೊಂಡಿದ್ದಾರೆ. ಗಂಡಸ್ತನ ಭಾಷೆ ಬಳಸುವುದು ಹಳೇ ಮೈಸೂರು ಭಾಗದಲ್ಲಿ ಸಹಜ. ಅದಕ್ಕೆ ತೋಳು ಏರಿಸಿಕೊಂಡು ಹೋದರೆ ಹೇಗೆ..? ಮಾತಿಗೆ ಮಾತಲ್ಲೇ ಉತ್ತರ ಕೊಡಬೇಕು. ಇದು ಪ್ರಜಾಪ್ರಭುತ್ವದ ಸೊಗಸು. ಡಿ ಕೆ ಸುರೇಶ್ ಸಚಿವರ ಮೇಲೆ ಹಲ್ಲೆಗೆ ಮುಂದಾಗಿದ್ದು ಖಂಡನೀಯ. ಗೂಂಡಾಗಿರಿ ಮೂಲಕ ಅಭಿಪ್ರಾಯ ಹತ್ತಿಕ್ಕಲು ಸಾಧ್ಯವಿಲ್ಲ.

ಸಂಸದರಿಗೆ ಅಭಿವೃದ್ಧಿ ಬಗ್ಗೆ ಹೇಳೋ ಅವಕಾಶವಿತ್ತು. ಅದನ್ನ ಬಿಟ್ಟು ಗೂಂಡಾಗಿರಿ ಮಾಡಿದ್ರೆ ಹೇಗೆ. ಡಿಕೆ ಸುರೇಶ್ ಅವರ ನಡೆಯನ್ನ ಸಿದ್ದರಾಮಯ್ಯ ಅವರು ಖಂಡಿಸುತ್ತಾರೆ ಎಂದು ಕೊಂಡೆ ಅವರು ಖಂಡಿಸಲೇ ಇಲ್ಲ. ಇನ್ನು ಡಿಕೆ ಶಿವಕುಮಾರ್ ಅವರು ತಮ್ಮನ ನಡೆ ಸಮರ್ಥಿಸುವ ಭರದಲ್ಲಿ ನಮ್ಮ ರಕ್ತವೇ ಬೇರೆ ಎಂದು ಹೇಳಿದ್ದಾರೆ. ಈ ಮೂಲಕ ಡಿ.ಕೆ ಶಿವಕುಮಾರ್ ತಮ್ಮ ರಕ್ತ ಅಪಾಯಕಾರಿ ರಕ್ತ ಎಂದು ತೋರಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!