ಬೆಂಗಳೂರು: ಕೆಲವೊಂದು ಸಲ ರಾಜಕಾರಣಿಗಳು ನಡೆದುಕೊಳ್ಳುವ ರೀತಿ, ರಾಜಕೀಯವೇ ಬೇರೆ ವೈಯಕ್ತಿಕ ಅಭಿಪ್ರಾಯವೇ ಬೇರೆ ಎನಿಸಿಬಿಡುತ್ತದೆ. ಅದು ಮತ್ತೊಮ್ಮೆ ಇಂದು ಪ್ರೂವ್ ಆಗಿದೆ. ಸರ್ಕಾರಿ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ಅಶ್ವತ್ಥ್ ನಾರಾಯಣ್ ಅವರು ಭಾಗಿಯಾಗಿದ್ದರು. ಈ ವೇಳೆ ಅಶ್ವತ್ಥ್ ನಾರಾಯಣ್ ಅವರು ಡಿಕೆ ಶಿವಕುಮಾರ್ ಅವರ ಬಗ್ಗೆ ಹಾಡಿ ಹೊಗಳಿದ್ದಾರೆ.
ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರುಮ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಈ ಕಾರ್ಯಕ್ರಮದ ಮೂಲಕ ಹಾರೈಸಿದ್ದಾರೆ. ಇನ್ನು ಉನ್ನತ ಮಟ್ಟಕ್ಕೆ ಹೋಗಲಿ, ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದಿದ್ದಾರೆ.
ಕಾಂಗ್ರೆಸ್ ಸರ್ಕಾರದಿಂದ ಜನಸ್ಪಂದನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಜನರ ಸಮಸ್ಯೆಗಳನ್ನು ಡಿಸಿಎಂ ಡಿಕೆ ಶಿವಕುಮಾರ್ ಆಲಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅಶ್ವತ್ಥ್ ನಾರಾಯಣ್ ಅವರ ಒಂದೊಂದು ಮಾತಿಗೂ ಡಿಕೆಶಿ ಬೆಂಬಲಿಗರು ಸಂತಸಪಟ್ಟರು. ಡಿಕೆ ಶಿವಕುಮಾರ್ ಕೂಡ ಈ ಮಾತು ಕೇಳಿಸಿಕೊಂಡು ಒಂದು ಸ್ಮೈಲ್ ನೀಡಿ ಸುಮ್ಮನೆ ಆದರು. ಜಮೀರ್ ಅಹ್ಮದ್ ಮಾತ್ರ ಜೋರು ಚಪ್ಪಾಳೆ ತಟ್ಟಿದರು. ಡಿಕೆ ಶಿವಕುಮಾರ್ ಮುಂದೆ ಸಿಎಂ ಆಗಲಿ ಎಂಬ ಮಾತಿಗೆ ಸಭೆಯಲ್ಲಿ ನೆರೆದಿದ್ದ ಜನ ತುಂಬಾ ಖುಷಿ ಪಟ್ಟು ಚಪ್ಪಾಳೆ ಹೊಡೆದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















