Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾವೂ ಹೆಂಗಸ್ರು, ಅವ್ರು ಗಂಡಸ್ರು.. : ಡಿಕೆಶಿ ಹಿಂಗ್ಯಾಕಂದ್ರು..?

Facebook
Twitter
Telegram
WhatsApp

ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಾಳೆಯಿಂದ ಪಾದಯಾತ್ರೆ ಶುರು ಮಾಡಲಿದ್ದಾರೆ. ಸದ್ಯ ಕೊರೊನಾ ಹೆಚ್ಚಳದ ಹಿನ್ನೆಲೆ ರಾಜ್ಯದಲ್ಲೂ ಟಫ್ ರೂಲ್ಸ್ ಜಾರಿಯಲ್ಲಿದೆ. ಹೀಗಾಗಿ ಬಿಜೆಪಿ ಸರ್ಕಾರದ ಮೇಲೆ ಕಾಂಗ್ರೆಸ್ ನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿದ್ದು, ಎಲ್ಲಿದೆ ರೀ ಕೊರೊನಾ. ಯಾರಾದರೂ ಐಸಿಯು ನಲ್ಲಿ ಅಡ್ಮಿಟ್ ಆಗಿದ್ದಾರಾ..? ಕೊರೊನಾದಿಂದ ಯಾರಾದ್ರೂ ನರಳುತ್ತಿದ್ದಾರಾ..? ಈಗಾಗಲೇ ಅಧಿಕಾರಿಗಳು ಕೇಸ್ ಹಾಕುವಂತೆ ಹೇಳಿದ್ದಾರೆ ನಮಗೆ ಏನು ತೊಂದರೆ ಕೊಡ್ತಾರೋ ಕೊಡಲಿ ಎಂದಿದ್ದಾರೆ.

ಬಿಜೆಪಿಯವರು ನಮ್ಮ ಪಾದಯಾತ್ರೆ ತಡೆಯಬೇಕು ಅಂತ ಸುಳ್ಳು ಪ್ರಕರಣ ಸಂಖ್ಯೆಯನ್ನು ದಾಖಲಿಸುತ್ತಿದ್ದಾರೆ. ಬಿಜೆಪಿಯಲ್ಲಿ ವೀರರೂ, ಶೂರರೂ ಇದ್ದಾರೆ. ನಾವೂ ಹೆಂಗಸರು, ನಾವೂ ಶಿಖಂಡಿಗಳು, ನಾವೆಲ್ಲಾ ಸೀರೆಯುಟ್ಟಿದ್ದೇವೆ. ನೀವೇ ನೋಡಿದ್ದೀರಲ್ಲ ಗಂಡಸು ಯಾರೆಂದು. ಸಿಎಂ ಮುಂದೆಯೇ ಹೇಳಿದ್ದಾರಲ್ಲ. ಅದಕ್ಕೆ ನಾವೆಲ್ಲಾ ಹೆದರುತ್ತೇವೆ. ನಾಳೆ ಪಾದಯಾತ್ರೆಯನ್ನ ಮಾಡಿಯೇ ಮಾಡ್ತೇವೆ ಎಂದು ಚಾಲೆಂಜ್ ಹಾಕಿದ್ದಾರೆ.

ಬಿಜೆಪಿಗರು ಹೆಣದಲ್ಲಿ, ಔಷಧಿಯಲ್ಲಿ, ಪರಿಹಾರದಲ್ಲಿ ಹಣ ಹೊಡೆದಿದ್ದಾರೆ. ಇದು 40 ಪರ್ಸೆಂಟ್ ಕಮಿಷನ್ ಸರ್ಕಾರ. ಇದನ್ನೆಲ್ಲಾ ನಾವೆಲ್ಲಿ ಬಯಲಿಗೆಳೆಯುತ್ತಿವೋ ಅಂತ ನಮ್ಮನ್ನ ಹತ್ತಿಕ್ಕಲು ಯತ್ನಿಸುತ್ತಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿ ರೈತರಿಗೆ, ಬಡವರಿಗೆ ಕಾಂಗ್ರೆಸ್ ಮಾಡಿದ್ದಷ್ಟು ಸಹಾಯವನ್ನ ಬಿಜೆಪಿ ಮಾಡಲಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೈರುತ್ಯ ಪದವೀಧರ ಚುನಾವಣೆ : ಬಂಡಾಯವೆದ್ದ ರಘುಪತಿ ಭಟ್ ಗೆ ಬೆಂಬಲ ನೀಡಿದ ಈಶ್ವರಪ್ಪ

ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಹಾಗೂ ರಘುಪತಿ ಭಟ್ ಇಬ್ಬರು ಈಗ ಒಂದೇ ದೋಣಿಯ ಪಯಣಗಿರು. ಯಾಕಂದ್ರೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಈಶ್ವರಪ್ಪ ಅವರು ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ.

ನಮ್ಮ ವಿದ್ಯಾಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ : ಡಾ.ಕೆ.ಎಂ.ವಿರೇಶ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಮೇ. 21:  ನನ್ನ ವಿದ್ಯಾ ಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಾಧ್ಯವಾದಷ್ಟು ಉಚಿತವಾದ ಶಿಕ್ಷಣವನ್ನು ನೀಡಲಾಗುವುದು

ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಕೊಡಬೇಕೆಂಬ ಪರಿಕಲ್ಪನೆ ರಾಜೀವ್‍ಗಾಂಧಿಯವರಲ್ಲಿತ್ತು : ಕೆ. ಅನಂತ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 21: ತಳಮಟ್ಟದಿಂದ ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಕೊಡಬೇಕೆಂಬ ಪರಿಕಲ್ಪನೆ ರಾಜೀವ್‍ಗಾಂಧಿಯವರಲ್ಲಿತ್ತು ಎಂದು ಜಿಲ್ಲಾ ಕಾಂಗ್ರೆಸ್

error: Content is protected !!