Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸೂಜಿ, ಕತ್ತಿ ಹೋಲಿಕೆ ನೀಡಿ ಬಿಜೆಪಿಯನ್ನು ವ್ಯಂಗ್ಯವಾಡಿದ ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್
---Advertisement---

 

ಬೆಂಗಳೂರು: ಶಿವಮೊಗ್ಗದ ರಾಗಿ ಗುಡ್ಡದಲ್ಲಿ ಈದ್ ಮಿಲಾದ್ ವೇಳೆ ನಡೆದ ಗಲಾಟೆ ಸಂಬಂಧ ಇನ್ನು ಪರಿಸ್ಥಿತಿ ಸಂಪೂರ್ಣವಾಗಿ ಸರಿಯಾಗಿಲ್ಲ. ಪೊಲೀಸರು ಕಾವಲಿದ್ದು, 144 ಸೆಕ್ಷನ್ ಕೂಡ ಮುಂದುವರೆದಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಎಚ್ಚರ ವಹಿಸಿದ್ದಾರೆ. ಇದರ ನಡುವೆ ಬಿಜೆಪಿ ನಾಯಕರು ಸತ್ಯ ಶೋಧನೆಗೆಂದು ಹೋಗಿದ್ದಾರೆ.

ನಿನ್ನೆ ಬಿಜೆಪಿ ನಾಯಕರ ತಂಡ ಸತ್ಯಶೋಧನೆಗೆಂದು ರಾಗಿಗುಡ್ಡಕ್ಕೆ ಭೇಟಿ ನೀಡಿತ್ತು. ಅಲ್ಲಿ ಹಲವರನ್ನು ಭೇಟಿ ಮಾಡಿ, ನಡೆದ ಘಟನೆಯ ಬಗ್ಗೆ ತಿಳಿಯುವುದಕ್ಕೆ ಪ್ರಯತ್ನಿಸಿತ್ತು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ನಿನ್ನೆಯೇ ತಿರುಗೇಟು ನೀಡಿದ್ದರು. ಬಿಜೆಪಿ ನಾಯಕರು ಸತ್ಯಶೋಧನೆಗೆಂದು ಅಲ್ಲಿ ಹೋಗಿರುವುದು ಯಾಕೆಂದು ಹೇಳಿದ್ದರು. ಹಾಗೇ ಕಾನೂನು, ಪೊಲೀಸರು ಇಲ್ವಾ ಎಂದೇ ಉತ್ತರಿಸಿದ್ದರು. ಇದೀಗ ಬಿಜೆಪಿಗರ ಸತ್ಯಶೋಧನೆಯ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ.

‘ನಾವೂ ಸೂಜಿ ತರಹ ಕೆಲಸ ಮಾಡಿದರೆ, ಬಿಜೆಪಿ ನಾಯಕರು ಕತ್ತರಿ ರೀತಿ ಕೆಲಸ ಮಾಡುತ್ತಾರೆ. ಅವರ ಸತ್ಯಶೋಧಕ ಏನಿದೆ..? ಅವರು ಸಮಾಜವನ್ನು ಹೊಡೆಯುವ ಕೆಲಸ ಮಾಡುತ್ತಿದ್ದಾರೆ. ನಾವೂ ಸಮಾಜವನ್ನು ಒಟ್ಟುಗೂಡಿಸುವ ಕೆಲಸ ಮಾಡುತ್ತಿದ್ದೇವೆ. ಸೂಜಿಯ ರೀತಿ ಹೊಲಿಯುವ ಕೆಲಸ ಮಾಡಿದರೆ, ಅವರು ಕತ್ತಿ ಥರ ಒಡೆಯುವ ರೀತಿ ಕೆಲಸ ಮಾಡುತ್ತಿದ್ದಾರೆ. ಇದೆ ಬಿಜೆಪಿಗೂ ಕಾಂಗ್ರೆಸ್ ಗೂ ಇರುವ ವ್ಯತ್ಯಾಸ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...