Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೂಜಿ, ಕತ್ತಿ ಹೋಲಿಕೆ ನೀಡಿ ಬಿಜೆಪಿಯನ್ನು ವ್ಯಂಗ್ಯವಾಡಿದ ಡಿಕೆ ಶಿವಕುಮಾರ್

Facebook
Twitter
Telegram
WhatsApp

 

ಬೆಂಗಳೂರು: ಶಿವಮೊಗ್ಗದ ರಾಗಿ ಗುಡ್ಡದಲ್ಲಿ ಈದ್ ಮಿಲಾದ್ ವೇಳೆ ನಡೆದ ಗಲಾಟೆ ಸಂಬಂಧ ಇನ್ನು ಪರಿಸ್ಥಿತಿ ಸಂಪೂರ್ಣವಾಗಿ ಸರಿಯಾಗಿಲ್ಲ. ಪೊಲೀಸರು ಕಾವಲಿದ್ದು, 144 ಸೆಕ್ಷನ್ ಕೂಡ ಮುಂದುವರೆದಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಎಚ್ಚರ ವಹಿಸಿದ್ದಾರೆ. ಇದರ ನಡುವೆ ಬಿಜೆಪಿ ನಾಯಕರು ಸತ್ಯ ಶೋಧನೆಗೆಂದು ಹೋಗಿದ್ದಾರೆ.

ನಿನ್ನೆ ಬಿಜೆಪಿ ನಾಯಕರ ತಂಡ ಸತ್ಯಶೋಧನೆಗೆಂದು ರಾಗಿಗುಡ್ಡಕ್ಕೆ ಭೇಟಿ ನೀಡಿತ್ತು. ಅಲ್ಲಿ ಹಲವರನ್ನು ಭೇಟಿ ಮಾಡಿ, ನಡೆದ ಘಟನೆಯ ಬಗ್ಗೆ ತಿಳಿಯುವುದಕ್ಕೆ ಪ್ರಯತ್ನಿಸಿತ್ತು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ನಿನ್ನೆಯೇ ತಿರುಗೇಟು ನೀಡಿದ್ದರು. ಬಿಜೆಪಿ ನಾಯಕರು ಸತ್ಯಶೋಧನೆಗೆಂದು ಅಲ್ಲಿ ಹೋಗಿರುವುದು ಯಾಕೆಂದು ಹೇಳಿದ್ದರು. ಹಾಗೇ ಕಾನೂನು, ಪೊಲೀಸರು ಇಲ್ವಾ ಎಂದೇ ಉತ್ತರಿಸಿದ್ದರು. ಇದೀಗ ಬಿಜೆಪಿಗರ ಸತ್ಯಶೋಧನೆಯ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ.

‘ನಾವೂ ಸೂಜಿ ತರಹ ಕೆಲಸ ಮಾಡಿದರೆ, ಬಿಜೆಪಿ ನಾಯಕರು ಕತ್ತರಿ ರೀತಿ ಕೆಲಸ ಮಾಡುತ್ತಾರೆ. ಅವರ ಸತ್ಯಶೋಧಕ ಏನಿದೆ..? ಅವರು ಸಮಾಜವನ್ನು ಹೊಡೆಯುವ ಕೆಲಸ ಮಾಡುತ್ತಿದ್ದಾರೆ. ನಾವೂ ಸಮಾಜವನ್ನು ಒಟ್ಟುಗೂಡಿಸುವ ಕೆಲಸ ಮಾಡುತ್ತಿದ್ದೇವೆ. ಸೂಜಿಯ ರೀತಿ ಹೊಲಿಯುವ ಕೆಲಸ ಮಾಡಿದರೆ, ಅವರು ಕತ್ತಿ ಥರ ಒಡೆಯುವ ರೀತಿ ಕೆಲಸ ಮಾಡುತ್ತಿದ್ದಾರೆ. ಇದೆ ಬಿಜೆಪಿಗೂ ಕಾಂಗ್ರೆಸ್ ಗೂ ಇರುವ ವ್ಯತ್ಯಾಸ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

error: Content is protected !!