Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆ ಶಿವಕುಮಾರ್ ಅವರು ಬಹಿರಂಗವಾಗಿ ಕ್ಷಮೆ ಯಾಚಿಸಬೇಕು : ಬಿ. ಇ. ಜಗದೀಶ್

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 02 : ಚಾಮುಂಡಿ ಬೆಟ್ಟ ಹಿಂದುಗಳದ್ದು ಅಲ್ಲ ಎಂದ ಡಿಕೆ ಶಿವಕುಮಾರ್ ಅವರು ಹೇಳುತ್ತಿದ್ದಾರೆ ಹಾಗಾದರೆ ಯಾರದ್ದು ಎಂದು ಎಎಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಇ. ಜಗದೀಶ್ ಪ್ರಶ್ನಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು,
ನಾನು ನನ್ನ ಹಿಂದೂ ಧರ್ಮವನ್ನ ಪೂಜಿಸುತ್ತೇನೆ. ಬೇರೆ ಧರ್ಮವನ್ನು ಗೌರವಿಸುತ್ತೇನೆ. ಆದರೆ ಇತ್ತೀಚಿಗೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಮುಂಡಿ ಬೆಟ್ಟವನ್ನು ಹಿಂದುಗಳು ಅಲ್ಲ ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ದೇಶಕ್ಕೆ ಸ್ವತಂತ್ರ ಬಂದಮೇಲೆ ಭಾರತ ಹಾಗೂ ಪಾಕಿಸ್ತಾನವನ್ನು ಬೇರೆ ಮಾಡಲಾಗಿದೆ. ರಾಷ್ಟ್ರಮಟ್ಟದಲ್ಲಿ ಭಾರತ ದೇಶವನ್ನು ಹಿಂದುಗಳ ರಾಷ್ಟ್ರ ಎಂದು ಕರೆಯುತ್ತಾರೆ. ಆದರೆ ಇವರು ನೀಡಿರುವ ಹೇಳಿಕೆ ಸಮಂಜಸವಲ್ಲ. ನಮ್ಮ ರಾಜ್ಯದ ಮೈಸೂರಿನಲ್ಲಿರುವ ಚಾಮುಂಡಿಬೆಟ್ಟವು ಇವರಿಗೆ ಇಟಲಿಗೆ ಸೇರಿದ್ದು ಎಂದುಕೊಂಡಿದ್ದಾರೆಯೇ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ನಮ್ಮ ಪುರಾತನ ಕಾಲದಿಂದಲೂ ರಾಜ ಮನೆತನಗಳು ಹಾಗೂ ಚಾಮುಂಡಿ ಬೆಟ್ಟ ಹಿಂದುಗಳ ಧಾರ್ಮಿಕ ಕೇಂದ್ರವಾಗಿದೆ. ಚಾಮುಂಡಿ ತಾಯಿಯನ್ನು ಹಾಗೂ ದಸರಾವನ್ನು ನೋಡಲು ಹೊರ ರಾಜ್ಯವಷ್ಟೇ ಅಲ್ಲದೆ ವಿದೇಶಗಳಿಂದ ಲಕ್ಷಗಟ್ಟಲೆ ಜನ ಬರುತ್ತಾರೆ. ಆದರೆ ಇವರ ಆಡಿರುವ ಮಾತು ಹಿಂದುಗಳಿಗೆ ಹಾಗೂ ಕರ್ನಾಟಕ ರಾಜ್ಯದ ಹಿಂದುಗಳ ಮನಸ್ಸಿಗೆ ನೋವಾಗಿದೆ ಎಂದಿದ್ದಾರೆ.

ಒಬ್ಬ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಈ ರೀತಿಯ ಹೇಳಿಕೆ ನೀಡುವುದು ವಿಷಾದಕರ ಸಂಗತಿ. ರಾಜಕೀಯದ ಏನು ಬೇಕಾದರೂ ಮಾತನಾಡುವ ಬಾಯಿ ಚಪಲವಾಗಿದೆ. ದೇಶದ ಬಗ್ಗೆ ಭಕ್ತಿರುವ ಜಮೀರ್ ಅಹ್ಮದ್ ರವರು ಮೋದಿ ಅವರು ಒಪ್ಪಿದರೆ ನಾನು ಯುದ್ಧಕ್ಕೆ ಹೋಗುತ್ತೇನೆಂದು ಹೇಳಿದರು. ಜಮೀರ್ ಅಹ್ಮದ್ ಗಿರುವ ದೇಶಭಕ್ತಿಯು ಕೂಡ ಇವರಿಲ್ಲ.

ವಿಧಾನಸೌಧದಲ್ಲಿ ರಾಜ್ಯಸಭೆ ಹಾಗೂ ವಿಧಾನಸಭೆಯಲ್ಲಿರುವ ಕಾಂಗ್ರೆಸ್ ಪಕ್ಷದ ಶಾಸಕರುಗಳು ಹಿಂದುಗಳಿಗೆ ನೋವಾಗುವ ರೀತಿ ನಡೆದುಕೊಳ್ಳುತ್ತಿದ್ದಾರೆ. ರಾಜ್ಯದ ಜನತೆಗೆ ಎಲೆಕ್ಷನ್ ಬಂದಾಗ ಒಂದಿಷ್ಟು ಹಣವನ್ನು ನೀಡಿದರೆ, ಮತ ನೀಡುತ್ತಾರೆ ಎಂಬ ದುರಹಂಕಾರದಿಂದ ಹೇಳಿಕೆ ನೀಡುತ್ತಿದ್ದಾರೆ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಧರ್ಮ ಹಾಗೂ ಸಮಾಜದ ಮಧ್ಯ ಮೋಸದ ಬಲೆಯನ್ನು ಹಾಕುತ್ತಿದ್ದಾರೆ‌. ಈ ಮೋಸದ ಬೆಲೆಯಿಂದ ಸಾರ್ವಜನಿಕರು ತಪ್ಪಿಸಿಕೊಳ್ಳಲಾಗುತ್ತಿಲ್ಲ.

ರಾಜ್ಯದಲ್ಲಿರುವ ಜನತೆಯ ಬಗ್ಗೆ ಅವರ ಆರ್ಥಿಕ ಪರಿಸ್ಥಿತಿಯ ಬಗ್ಗೆ ಯಾರೂ ಕೂಡ ತಲೆ ಆರ್ಥಿಕವಾಗಿ ಹಿಂದುಳಿದವರ ಅವರ ವಿದ್ಯಾಭ್ಯಾಸಕ್ಕೆ ತಲೆಕೆಡಿಸಿಕೊಳ್ಳುತ್ತಿಲ್ಲ. ಇವರು ನೀಡಿರುವ ಗ್ಯಾರಂಟಿ ಬೇಕು ಬೇಡ ಎನ್ನುವ ಮಟ್ಟಿಗೆ ಇದೆ. ಆದರೆ ಈ ರಾಜ್ಯದಲ್ಲಿ ಹಳ್ಳಿಜನರು ಎಲ್ಲರೂ ಒಂದೇ ಎಂಬ ಭಾವನೆಗಳಿಂದದ್ದಾರೆ. ಜೀವನ ಸಾಗಿಸುತ್ತಿದ್ದಾರೆ. ಆದರೆ ರಾಜ್ಯದ ಜನತೆ ಇಂಥ ರಾಜ್ಯ ರಾಜಕೀಯ ಪಕ್ಷಗಳನ್ನು ದೂರ ಇಟ್ಟು ಮತದಾನ ಮಾಡಬೇಕು. ಇಂಥವರಿಂದ ನಮ್ಮ ದೇಶಕ್ಕೆ ಹಾಗೂ ನಮ್ಮ ರಾಜ್ಯಕ್ಕೆ ತೊಂದರೆ ತಪ್ಪಿದ್ದಲ್ಲ. ದಯಮಾಡಿ ಮುಂದಿನ ದಿನಗಳಲ್ಲಿ ಇಂತಹ ಮಾತುಗಳನ್ನು ಯಾರೂ ಕೂಡ ಆಡಬಾರದು. ಉಪಮುಖ್ಯಮಂತ್ರಿಗಳ ಮಾತು ರಾಜ್ಯದ ಜನತೆ ಹಾಗೂ ನಮ್ಮ ದೇಶದ ಹಿಂದುಗಳಲ್ಲಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ನಮ್ಮ ಪಕ್ಷದ ವತಿಯಿಂದ ನಾವು ರಾಜ್ಯದ್ಯಂತ ಧರಣಿ ನಡೆಸಲು ಮುಂದಾಗುತ್ತೇವೆ ಎಂದು ತಿಳಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment