Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

2-3 ತಿಂಗಳಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ : ರಾಮನಗರ ಶಾಸಕ ಹೇಳಿದ್ದೇನು..?

---Advertisement---

ರಾಮನಗರ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಿಎಂ ಬದಲಾವಣೆಯ ವಿಚಾರವೇ ಸಾಕಷ್ಟು ಚರ್ಚೆ ಆಗ್ತಾ ಇದೆ. ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರ ಜೋರಾಗಿಯೇ ಇದೆ. ಬಿಜೆಪಿ ನಾಯಕರು ಕೂಡ ಈ ಬಾರಿಯ ದಸರಾ ವೇಳೆಗೆ ಸಿಎಂ ಬದಲಾಗ್ತಾರೆ. ಹೊಸ ಮುಖ್ಯಮಂತ್ರಿಯೇ ದಸರಾ ಉದ್ಘಾಟನೆ ಮಾಡುವುದು ಎಂದಿದ್ದಾರೆ. ಈ ರೀತಿಯ ಬೆಳವಣಿಗೆಯ ನಡುವೆ ಇದೀಗ ರಾಮನಗರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ಡಿಕೆ ಶಿವಕುಮಾರ್ ಅವರ ಪರ ಬ್ಯಾಟ್ ಬೀಸಿದ್ದಾರೆ.

ರಾಜಕಾರಣದಲ್ಲಿ ಬದಲಾವಣೆ ಸಹಜ. ಯಾರಿಗೆ ಸೂಕ್ತ ಎನಿಸುತ್ತದೆಯೋ ಅವರಿಗೆ ಅಧಿಕಾರ ಸಿಗಲಿದೆ. ಬದಲಾವಣೆ ಕೇಳ್ತಿದ್ದಾರೆ. ಬದಲಾವಣೆ ಆಗಲಿದೆ. ಮುಂದಿನ ಎರಡ್ಮೂರು ತಿಂಗಳಲ್ಲಿ ಎಲ್ಲವೂ ತೀರ್ಮಾನವಾಗಲಿದೆ. ಇದೆ ವೇಳೆ ರಾಜಣ್ಣನವರ ಕ್ರಾಂತಿ ಬಗ್ಗೆ ಮಾತನಾಡಿದ ಇಕ್ಬಾಲ್ ಅವರು, ಕ್ರಾಂತಿ ಅಂದ್ರೆ ಮಳೆ ಜೋರಾಗಿ ಬರ್ತಿದೆ. ಸೇತುವೆ ಕೊಚ್ಚಿಕೊಂಡು ಹೋಗ್ತಿದೆ ಅಂತ ಅರ್ಥನಾ..? ಕಾಂಗ್ರೆಸ್ ನಲ್ಲಿ ಶಿಸ್ತು, ಬದ್ಧತೆ ಇದೆ. ಯಾವ ಪವರ್ ಸೆಂಟರ್ ಕೂಡ ಇಲ್ಲ. ಹೈಕಮಾಂಡ್ ಒಂದೇ ಎಂದಿದ್ದಾರೆ.

ಇವರೆಲ್ಲಾ ಕ್ರಾಂತಿ ಅಂತಿದ್ದಾರಲ್ಲ, ಅದೇ ಆಗೋದು. ಮುಂದಿನ ಎರಡ್ಮೂರು ತಿಂಗಳಲ್ಲಿ ಎಲ್ಲವೂ ತೀರ್ಮಾನವಾಗಲಿದೆ. ಡಿಕೆ ಶಿವಕುಮಾರ್ ಕಾರ್ಯಕ್ರಮಗಳು ಐತಿಹಾಸಿಕ, ಇದು ಹೈಕಮಾಂಡ್ ಗಮನದಲ್ಲಿದೆ. ಸೂಕ್ತ ಸಮಯಕ್ಕೆ ಅವಕಾಶ ಮಾಡಿಕೊಡ್ತಾರೆ. ಆ ನಂಬಿಕೆ, ವಿಶ್ವಾಸ ನಮಗಿದೆ. ರಾಜಕೀಯದಲ್ಲಿ ಬದಲಾವಣೆ ಸಹಜ. ಸೂಕ್ತ ವ್ಯಕ್ತಿಗೆ ಅಧಿಕಾರ ಸಿಗಲಿದೆ. ಈ ಸರ್ಕಾರ ಬರುವುದಕ್ಕೂ ಮುಂಚೆ ನಮ್ಮ ಸಂಖ್ಯೆ ಎಷ್ಟಿತ್ತು. ಈ ಸಂಖ್ಯೆ ಬರುವುದಕ್ಕೆ ಹೋರಾಟ, ಶ್ರಮ, ಆಸಕ್ತಿ ಯಾರದ್ದು ಎಂದು ಎಲ್ಲರಿಗೂ ಗೊತ್ತು ಎಂದು ಹೇಳುವ ಮೂಲಕ ಡಿಕೆ ಶಿವಕುಮಾರ್ ಪರವಾಗಿ ಬ್ಯಾಟ್ ಬೀಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...