ಬೆಂಗಳೂರು: ಈ ಹಿಂದೆ ಫಿಲ್ಮ್ ಫೆಸ್ಟಿವಲ್ ಗೆ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿಲ್ಲವಾದ್ದರಿಂದ ಇಂಡಸ್ಟ್ರಿಯ ನಟ್ಟುಬೋಲ್ಟ್ ಹೇಗೆ ಟೈಟ್ ಮಾಡಬೇಕು ಅನ್ನೋದು ನಮಗೆ ಗೊತ್ತು ಎಂದಿದ್ದರು. ಈಗ ಬಿಗ್ ಬಾಸ್ ಮನೆಗೆ ಲಾಕ್ ಬಿದ್ದ ಕಾರಣಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಕಾರಣ ಎಂಬ ಚರ್ಚೆಗಳಾಗ್ತಾ ಇದೆ. ಸಿಕ್ಕಾಪಟ್ಟೆ ಟ್ರೋಲ್ ಕೂಡ ಆಗ್ತಾ ಇದೆ. ಜೆಡಿಎಸ್ ಕೂಡ ಈ ಸಂಬಂಧ ಟ್ವೀಟ್ ಮಾಡಿತ್ತು. ಬಿಗ್ ಬಾಸ್ ರಿಯಾಲಿಟಿ ಶೋ ಬಂದ್ ಮಾಡಿಸಿ, ಕಲಾವಿದರ ಮೇಲೆ ಸೇಡು ತೀರಿಸಿಕೊಂಡ ನಟ್ಟು ಬೋಲ್ಟ್ ಮಿನಿಸ್ಟರ್ ಡಿಕೆ ಶಿವಕುಮಾರ್ ಎಂದು ಟ್ವೀಟ್ ಮಾಡಿತ್ತು.
ಇದೀಗ ಈ ಸಂಬಂಧ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರಸ್ವಾಮಿ ಮತ್ತು ಜೆಡಿಎಸ್ ನವರು ರಾಜಕೀಯ ಮಾಡಲಿ. ನಾನು ಅದರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿಯವರು ಮಾಡಿದ್ದಾರೆ. ನಾನು ಜಿಲ್ಲಾಧಿಕಾರಿಗಳಿಗೆ ಹೇಳಿದ್ದೀನಿ. ಉದ್ಯೋಗ ಮುಖ್ಯ. ಏನೇ ಇದ್ದರೂ ಅವರಿಗೆ ಒಂದು ಅವಕಾಶ ಸಿಗಬೇಕು. ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಹೇಳಿದ್ದೇನೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಿಗೂ ಕಾಲ್ ಮಾಡಿದ್ದೆ. ನಮ್ಮಲ್ಲಿ ಮನರಂಜನೆ ಸಹ ಮುಖ್ಯ
ನಾನೇ ಉದ್ಘಾಟನೆ ಮಾಡಿದ್ದೀನಿ. ಅವರಿಗೆ ನನ್ನ ಬಗ್ಗೆ ಮಾತನಾಡಿಲ್ಲ ಅಂದ್ರೆ ನೆಮ್ಮದಿ ಇರಲ್ಲ. ಅವರಿಗೆ ಶಕ್ತಿ ಬರಲ್ಲ, ನಿದ್ದೆ ಬರಲ್ಲ ಅವರಿಗೆ. ಬಿಗ್ ಬಾಸ್ ಆಗಲಿ, ಯಾವುದೇ ಆಗಲಿ, ಮನೋರಂಜನೆ ಇರಬೇಕು. ಹೂಡಿಕೆ ಮಾಡಿರುತ್ತಾರೆ ಏನೋ ತಪ್ಪು ಮಾಡಿರ್ತಾರೆ. ತಪ್ಪನ್ನು ಸರಿ ಮಾಡಿಕೊಳ್ಳಲು ಅವಕಾಶ ಕೊಡಬೇಕು. ಇದು ನನ್ನ ಸಲಹೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.


