Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾರ ಹಾಕಿದ್ದ ಪೈನಾಪಲ್ ಅನ್ನೇ ಕಿತ್ತು ತಿಂದ ಡಿಕೆ ಶಿವಕುಮಾರ್..!

Facebook
Twitter
Telegram
WhatsApp

ಮಂಡ್ಯ: ರಾಜಕಾರಣಿಗಳು ಯಾವಾಗಲೂ ಸೀರಿಯಸ್ ಅಲ್ಲ. ಮಾತನ್ನು ಸೀರಿಯಸ್ ಆಗಿ ಆಡುತ್ತಾರೆ, ವಾಗ್ದಾಳಿಯನ್ನು ಸೀರಿಯಸ್ ಆಗಿ ಮಾಡುತ್ತಾರೆ. ಆದರೆ ಇವರ ನಡುವೆಯೂ ಆಗಾಗ ಫನ್ ಮೂಮೆಂಟ್ ನಡೆಯುತ್ತದೆ. ಅಂಥದ್ದೊಂದು ಘಟನೆ ಇಂದು ಮಂಡ್ಯದಲ್ಲಿ ನಡೆದಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಹಾಕಿದ್ದ ಹಾರದಲ್ಲಿನ ಹಣ್ಣನ್ನೇ ಕಿತ್ತು ತಿಂದಿರುವ ಸನ್ನಿವೇಶ ಕಂಡು ಬಂದಿದೆ.

ಸದ್ಯ ಚುನಾವಣಾ ಪ್ರಚಾರದಲ್ಲಿ ರಾಜಕೀಯ ಪಕ್ಷಗಳು ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಕಾಂಗ್ರೆಸ್ ಕೂಡ ಪ್ರಜಾಧ್ವನಿ ಎಂಬ ಕಾರ್ಯಕ್ರಮದಡಿ ಜನರ ಬಳಿ ತಲುಪುತ್ತಿದೆ. ಇಂದು ಮಂಡ್ಯದಲ್ಲಿ ರ್ಯಾಲಿ ನಡೆದಿದೆ. ಈ ವೇಳೆ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ತೆರೆದ ವಾಹನದಲ್ಲಿ ಪ್ರಚಾರ ಆರಂಭಿಸಿದ್ದರು. ಈ ವೇಳೆ ಅಭಿಮಾನಿಗಳೆಲ್ಲಾ ಕಾಂಗ್ರೆಸ್ ನಾಯಕರಿಗೆ ಪೈನಾಪಲ್ ಹಾರವನ್ನು ಹಾಕಿದರು.

ಹಾರ ತುಂಬಾ ದೊಡ್ಡದಾಗಿತ್ತು. ಹೀಗಾಗಿ ಜೆಸಿಬಿ ಮೂಲಕ ಹಾರವನ್ನು ಹಾಕಲಾಗಿತ್ತು. ಈ ವೇಳೆ ಹಾರದಿಂದಾನೇ ಡಿಕೆಶಿ ಪಕ್ಕದಲ್ಲಿ ಇದ್ದ ಒಬ್ಬರು ಹಣ್ಣನ್ನು ಕಿತ್ತುಕೊಟ್ಟರು. ಆ ಹಣ್ಣನ್ನು ಡಿಕೆ ಶಿವಕುಮಾರ್ ಕೈನಲ್ಲಿಯೇ ಎರಡು ಭಾಗ ಮಾಡಿ, ತಿಂದರು. ಜೊತೆಗೆ ಪಕ್ಕದಲ್ಲಿಯೂ ಇದ್ದವರಿಗೂ ನೀಡಿದರು. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!