Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆ ಶಿವಕುಮಾರ್ ಹುಟ್ಟುಹಬ್ಬ..ಮೈಡಿಯರ್ ಫ್ರೆಂಡ್ ಎಂದ ಸಿಎಂ ಸಿದ್ದರಾಮಯ್ಯ.. ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್

---Advertisement---

ಬೆಂಗಳೂರು: ಇಂದು ಡಿಕೆ ಶಿವಕುಮಾರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. 62ನೇ ವಸಂತಕ್ಕೆ ಕಾಲಿಟ್ಟ ಡಿಕೆಶಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಅವರು ಮಾಡಿರುವ ಸ್ಪೆಷಲ್ ವಿಶ್ ಎಲ್ಲರ ಗಮನ ಸೆಳೆದಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆಗಿನ ಫೋಟೋ ಹಾಕಿ ‘ಮೈ ಡಿಯರ್ ಫ್ರೆಂಡ್’ ಎಂದು ಶುರು ಮಾಡಿದ್ದಾರೆ.

ಟ್ವಿಟ್ಟರ್ ನಲ್ಲಿ ಶುಭಾಶಯ ತಿಳಿಸಿದ್ದು, ಮೈ ಡಿಯರ್ ಫ್ರೆಂಡ್ ಅಂಡ್ ಸಹದ್ಯೋಗಿ. ನಿಮ್ಮ ಶ್ರದ್ಧೆ, ಸಂಘಟನಾ ಕೌಶಲ್ಯ, ಬದ್ಧತೆ ಯಾವಾಗಲೂ ಎದ್ದು ಕಾಣುತ್ತದೆ. ನಿಮಗೆ ಯಶಸ್ಸು, ಖುಷಿ ಸಿಗಲಿ ಎಂದು ಹಾರೈಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್, ನಿಮ್ಮ ಹಾರೈಕೆಗೆ ಧನ್ಯವಾದಗಳು.ನಾಡಿನ ಜನರ ಕಲ್ಯಾಣಕ್ಕಾಗಿ ಒಟ್ಟಿಗೆ ಶ್ರಮಿಸೋಣಾ ಎಂದಿದ್ದಾರೆ.

ಇನ್ನು ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬಕ್ಕೆ ಅವರ ಅಭಿಮಾನಿಗಳು, ಕಾರ್ಯಕರ್ತರು ಎಲ್ಲರೂ ಶುಭಕೋರುತ್ತಿದ್ದಾರೆ. ರಾಜಕೀಯ ಗಣ್ಯರು ಸಹ ಶುಭಕೋರಿದ್ದಾರೆ. ಇನ್ನು ಸಂಸದ ಸುರೇಶ್ ಅಣ್ಣನಿಗಾಗಿ ಸ್ಪೆಷಲ್ ಸಾಂಗ್ ಒಂದನ್ನು ಎಡುಟ್ ಮಾಡಿಸಿ, ಫೋಟೋ ಹಾಕಿ ಶುಭಕೋರಿದ್ದಾರೆ. ರಾಜ್ಯದ ಉಪಮುಖ್ಯಮಂತ್ರಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಕನ್ನಡಿಗರ ಭರವಸೆಯ ನಾಯಕ, ಪ್ರೀತಿಯ ಸಹೋದರ ಡಿ.ಕೆ ಶಿವಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ಆಯುರಾರೋಗ್ಯ ಹಾಗೂ ಮತ್ತಷ್ಟು ಜನಸೇವೆ ಮಾಡಯವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶುಭಕೋರಿದ್ದಾರೆ. ಸದ್ಯಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಡಿಕೆ ಶಿವಕುಮಾರ್ ಅವರ ಬರ್ತ್ ಡೇ ಟ್ರೆಂಡಿಂಗ್ ನಲ್ಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment