Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತೆಲಂಗಾಣದ ಜವಾಬ್ದಾರಿ ಹೊತ್ತು ಕರ್ನಾಟಕದಂತೆ ಗೆಲುವು ಸಾಧಿಸಲಿದ್ದಾರಾ ಡಿಕೆಶಿ..?

Facebook
Twitter
Telegram
WhatsApp

ಈ ಬಾರಿ ಭರ್ಜರಿ ಮತಗಳ‌ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಇದರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪಾತ್ರವೂ ಬಹಳ ಮಹತ್ವದ್ದಾಗಿದೆ. ಹೀಗಾಗಿ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲೂ ಇದೇ ತಂತ್ರಗಾರಿಕೆ ಮಾಡಲು ಹೊರಟಿದ್ದಾರೆ.

ಕರ್ನಾಟಕದಂತೆ ತೆಲಂಗಾಣದಲ್ಲೂ ಪಕ್ಷ ಅಧಿಕಾರಕ್ಕೆ ತರುವುದಕ್ಕೆ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಸೂಚನೆ ನೀಡಲಾಗಿದೆ‌ ಎನ್ನಲಾಗಿದೆ. ಹೀಗಾಗಿಯೇ ತೆಲಂಗಾಣ ರಾಜ್ಯಕ್ಕೆ ಹೆಚ್ಚಿನ ಸಮಯ ನೀಡಲು ಹಾಗೂ ಅಲ್ಲಿನ ಕಾಂಗ್ರೆಸ್ ಘಟಕಕ್ಕೆ ಹೆಚ್ಚಿನ ಸಮಯ ನೀಡಲು ಸೂಚಿಸಲಾಗಿದೆ. ಡಿಕೆಶಿ ಅವರ ಸಂಘಟನಾ ಕೌಶಲ್ಯದ ಮೇಲೆ ಕಾಂಗ್ರೆಸ್ ಹೈಕಮಾಂಡ್ ನಂಬಿಕೆ ಇಟ್ಟಿದೆ.

ಇನ್ನು ನಾಲ್ಕು ತಿಂಗಳ ಒಳಗಾಗಿ ತೆಲಂಗಾಣದಲ್ಲಿ ಚುನಾವಣೆ ನಡೆಯಲಿದೆ. ಸದ್ಯ ಭಾರತ್ ರಾಷ್ಟ್ರ ಸಮಿತಿ ಪಕ್ಷ ಅಧಿಕಾರದಲ್ಲಿದ್ದು, ಕೆಸಿಆರ್ ಎಂದೇ ಕರೆಯಲ್ಪಡುವ ಹಾಲಿ ಸಿಎಂ ಕೆ. ಚಂದ್ರಶೇಖರ ರಾವ್ ಅವರ ಸರ್ಕಾರವು ಪ್ರಾರಂಭಿಸಿದ ಕಲ್ಯಾಣ ಯೋಜನೆಗಳು ಅವರನ್ನು ಉತ್ತಮ ಸ್ಥಾನದಲ್ಲಿ ಇರಿಸಿವೆ. ಹಾಲುಣಿಸುವ ತಾಯಂದಿರಿಗೆ ಪೌಷ್ಟಿಕಾಂಶ, ವೃದ್ಧಾಪ್ಯ ವೇತನ, ನೀರಾವರಿ ಯೋಜನೆಗಳು, ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರು, ಮದುವೆಯಾದ ದಂಪತಿಗಳಿಗೆ ಆರ್ಥಿಕ ನೆರವು ಇತ್ಯಾದಿ ಯೋಜನೆಗಳು ಕೆಸಿಆರ್ ಅವರ ಜನಪ್ರಿಯತೆಯನ್ನು ಹೆಚ್ಚಿಸಿವೆ ಮತ್ತು ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಸವಾಲುಗಳನ್ನು ಹಿಮ್ಮೆಟ್ಟಿಸಲು ಅವರಿಗೆ ಸಹಾಯ ಮಾಡಿದೆ. ಹೀಗಾಗಿ ಈ ಬಾರಿ ಹೇಗಾದರೂ ಮಾಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಯೋಚಿಸಲಾಗಿದೆ. ಅದರ ಉಸ್ತುವಾರಿಯನ್ನು ಡಿಕೆ ಶಿವಕುಮಾರ್ ಅವರಿಗೆ ನೀಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

error: Content is protected !!