Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಂದೇ ವೇದಿಕೆ ಹಂಚಿಕೊಂಡ ಡಿಕೆಶಿ – ಸಿದ್ದರಾಮಯ್ಯ : ವಿರೋಧಿಗಳಿಗೆ ಕೊಟ್ಟ ಸಂದೇಶವೇನು..?

---Advertisement---

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಪಕ್ಷದ ಘನತೆ, ಗೌರವವನ್ನ ಹೇಗೆ ಕಾಪಾಡಬೇಕು ಎಂಬುದು ಬಹಳ ಚೆನ್ನಾಗಿ ಗೊತ್ತು. ಅದರಲ್ಲೂ ತಮ್ಮ ಪಕ್ಷ, ತಮ್ಮ ಮುಖ್ಯಮಂತ್ರಿಗಳನ್ನ ವಿರೋಧ ಪಕ್ಷದ ನಾಯಕರ ಕೈಗಿಟ್ಟು ತಮಾಷೆ ನೋಡುವವರಲ್ಲ. ಸಿಎಂ ಆಗಬೇಕೆಂಬ ಆಸೆ ಇದೆ. ಆದರೂ ಮಾತಿನಲ್ಲಿ ಮುಖ್ಯಮಂತ್ರಿಗಳಿಗೆ ಗೌರವ ನೀಡುವ ಮಾತನ್ನೇ ಆಡ್ತಾರೆ. ರಾಜಕೀಯ ವಲಯದಲ್ಲಿ ಸಿಎಂ ಹುದ್ದೆಯ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಹೀಗಿರುವಾಗಲೂ ಸಿಎಂ ಜೊತೆಗೆ ಖುಷಿ ಖುಷಿಯಾಗಿ ವೇದಿಕೆಯನ್ನು ಹಂಚಿಕೊಂಡಿದ್ದು, ವಿರೋಧಿ ಬಣಕ್ಕೆ ನಾವೆಲ್ಲ ಒಂದೇ ಎಂಬ ಸಂದೇಶವನ್ನ ಸಾರಿದ್ದಾರೆ.

ವಿಶ್ವ ಮೀನುಗಾರಿಕೆ ಮೇಳ 2025 ಕಾರ್ಯಕ್ರಮವನ್ನು ಹೆಬ್ಬಾಳದಲ್ಲಿ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಿಎಂ ಹಾಗೂ ಡಿಸಿಎಂ ಅತಿಥಿಗಳು ಎಂಬುದು ಮೊದಲೇ ನಿರ್ಧಾರವಾಗಿತ್ತು. ಆದರೆ ಕಳೆದ ಎರಡು ದಿನದಿಂದ ಡಿಕೆ ಶಿವಕುಮಾರ್ ಅವರು ಹೊರಗೆ ಬಂದಿರಲಿಲ್ಲ. ರಾಜಕೀಯ ಬೆಳವಣಿಗೆ ಏನೇನೋ ನಡೆಯುತ್ತಿತ್ತು. ಇದರ ನಡುವೆಯೂ ಮೀನುಗಾರಿಕೆ ಸಚಿವ ಮಂಕಾಳು ವೈದ್ಯ ಅವರು ನೇರವಾಗಿ ಹೋಗಿ ಆಹ್ವಾನಿಸಿದ್ದರು.

ಇಂದು ಸಿಎಂ ಸಿದ್ದರಾಮಯ್ಯ ಅವರಿದ್ದ ವೇದಿಕೆಗೆ ಡಿಕೆ ಶಿವಕುಮಾರ್ ಅವರು ಕೂಡ ಆಗಮಿಸಿದ್ದರು. ಇಬ್ಬರು ಒಂದೇ ವೇದಿಕೆಯಲ್ಲಿ ಕುಳಿತು ಒಂದಷ್ಟು ಪಿಸು ಧ್ವನಿಯಲ್ಲಿ ಚರ್ಚೆಯನ್ನು ಮಾಡಿದರು. ಸದ್ಯ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯಿಂದ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರಿಂದ ಅಂತರ ಕಾಯ್ದುಕೊಳ್ಳುತ್ತಾರೆ ಎಂದೇ ಭಾವಿಸಲಾಗಿತ್ತು. ಆದರೆ ರಾಜಕೀಯವನ್ನು ಹೊರತುಪಡಿಸಿದ ಇಬ್ಬರ ಅನ್ಯೋನ್ಯತೆ ವೇದಿಕೆ ಮೇಲೆ ಕಂಡಿದೆ‌. ಇದರಿಂದ ವಿರೋಧ ಪಕ್ಷಕ್ಕೂ ಸಂದೇಶ ಕೊಟ್ಟಂತೆ ಆಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...