Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆಶಿ ಸಿಎಂ ಆಗ್ತಾರೆ : ನೊಣವಿನಕೆರೆ ಸ್ವಾಮೀಜಿಗಳ ಭವಿಷ್ಯಕ್ಕೆ ಕುಮಾರಸ್ವಾಮಿ ಏನಂದ್ರು..?

---Advertisement---

ಕಾಂಗ್ರೆಸ್ ನಲ್ಲಿ ಸಿಎಂ ವಿಚಾರ ಆಗಾಗ ಮುನ್ನೆಲೆಗೆ ಬಂದು ನಿಲ್ಲುತ್ತದೆ. ಡಿಕೆ ಶಿವಕುಮಾರ್ ಬೆಂಬಲಿಗರು ಆದಷ್ಟು ಬೇಗ ನಮ್ಮ ನಾಯಕ ಸಿಎಂ ಆಗಲಿ ಎಂದೇ ಹಾರೈಸುತ್ತಿದ್ದಾರೆ. ಇದರ ನಡುವೆ ನೊಣವಿ‌ಕೆರೆ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದಿದ್ದಾರೆ. ಇದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಲೋಕಸಭಾ ಚುನಾವಣಾ ಆದ್ಮೇಲೆ ಅರ್ಜಿ ಹಾಕಿಕೊಂಡು ಹೋಗಿದ್ದಾರೆ. ಯಾರೂ ಬೇಕಾದರೂ ಆಗಬಹುದು. ಐವತ್ತು, ಅರವತ್ತು ಜನ ಕರ್ಕೊಂಡು ಬರ್ತೀನಿ, ಏನು ತೊಂದರೆ ಆಗುವುದು ಬೇಡ ಅಂತ ಹೇಳಿ ಹೋಗಿದ್ದಾರಲ್ಲ. ಸಣ್ಣ ಪುಟ್ಟವರು ಹೋಗುವುದಕ್ಕೆ ಆಗುತ್ತಾ..? ಐವತ್ತು ಅರವತ್ತು ಜನ ಕರ್ಕೊಂಡು ಎಂದಿದ್ದಾರೆ.

ಯಾರೋ ಮಾಹಿತಿ ಹೇಳುತ್ತಿದ್ದರು ಮೊನ್ನೆ. ನಿಮ್ಮ ಜೊತೆಗೆ ಬಂದು ಬಿಡ್ತೀನಿ ಅಂತ. ಅಲ್ಲಿಯವರೆಗೂ ರಿಲೀಫ್ ಕೊಡಿ ಅಂತ ಹೋಗಿದ್ದು ಗೊತ್ತೇ ಇದೆ. ಲೋಕಸಭಾ ಚುನಾವಣೆ ಕಳೆಯಲಿ. ಮಹಾರಾಷ್ಟ್ರದಲ್ಲಿ ಆಯ್ತಲ್ಲ ಲ. ಇಲ್ಲಿ ಯಾರೂ ಹುಟ್ಟಿಕೊಳ್ಳುತ್ತಾರೋ ಗೊತ್ತಿಲ್ಲ. ಈ ದೇಶದಲ್ಲಿ ಇವತ್ತಿನ ರಾಜಕಾರಣ ನೋಡಿದರೆ ಏನು ಬೇಕಾದರೂ ನಡೆಯಬಹುದು.

ಇಲ್ಲಿ ಸದ್ಯಕ್ಕೆ ಯಾರಿಗೂ ಪ್ರಾಮಾಣಿಜತೆ ಉಳಿದಿಲ್ಲ. ಅವರವರ ಸ್ವಾರ್ಥಕ್ಕೆ ಏನು ಬೇಕೋ ಅದನ್ನು ಮಾಡಿಕೊಂಡು ಹೋಗುತ್ತಾರೆ. ಇವತ್ತು ಇಲ್ಲಿ ಇರುತ್ತಾರೆ. ಆದರೆ ಅನುಕೂಲ ಆಗಬೇಕು ಎಂದರೆ ಮತ್ತೊಂದು ಕಡೆಗೂ ಹೋಗುತ್ತಾರೆ. ರಾಜಕಾರಣದಲ್ಲಿ ಇದನ್ನೆ ನೋಡಿಕೊಂಡು ಬಂದಿದ್ದೇವೆ. ಅದೇ ರೀತಿ ನಡೆದುಕೊಂಡು ಬಂದಿದೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment